ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು.
2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…