ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು.
2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…