ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಗೆ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲಾ ಪೊಲೀಸರು ಮತ್ತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿರುವ ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಡಿವೈಸ್ ಗಳ ಮೂಲಕ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಅಥಣಿ ತಾಲೂಕಿನ ನದಿ ಇಂಗಳಗಾವ್ ನ ಕಿರಣ್ ಸಹದೇವ್ ಕೊರಬು (28), ಬೈಲಹೊಂಗಲ ತಾಲುಕಿನ ಜಕನಾಯಕನಕೊಪ್ಪ ಗ್ರಾಮದ ನಾಗಯ್ಯ ಈರಯ್ಯ ಹುಬ್ಬಳ್ಳಿ (26), ಗೋಕಾಕ್ ತಾಲೂಕಿನ ಹಡಗಿನಾಳ ಗ್ರಾಮದ ನಾಗಪ್ಪ ಉದ್ದಪ್ಪ ಹೊಸಮನಿ (29), ಗೋಕಾಕ ತಾಲೂಕಿನ ಬೆಣಚಿಮನರಡಿ ಗ್ರಾಮದ ಶಶಿಕಾಂತ ಶಿವಪ್ಪ ಮಾಗಿ (25) ಹಾಗೂ ಬಗರನಾಳ ಗ್ರಾಮದ ದೇವರಾಜ ಭೀಮಪ್ಪ ಅವಲಿ (26) ಬಂಧಿತರು.
2022 ಅ.7 ರಂದು ನಡೆದ ಕೆಪಿಟಿಸಿಎಲ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಬಂಧಿತ ಆರೋಪಿಗಳು ಅತ್ಯಾಧುನಿಕ ಡಿವೈಸ್ ಬಳಸಿ ಪರೀಕ್ಷೆ ಬರೆದಿದ್ದರು.ಪ್ರಕರಣ ಬಗ್ಗೆ ಈಗಾಗಲೇ ಪೊಲೀಸರು 36 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…