ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಫೋಟೊ ತೆಗೆಯಲು ಹೋಗಿ ಸಿಕ್ಕಿಬಿದ್ದು ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ಮತ್ತೆ ಹಲ್ಲೆ ನಡೆಸಲು ಮುಂದಾಗಿ ಆರೋಪಿ ಪರಾರಿಯಾದ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂಬುವನು ಸ್ನಾನದ ಕೊಠಡಿಯ ಹಿಂಬದಿಗೆ ಬಂದು ಬಾಲಕಿಯು ಸ್ನಾನ ಮಾಡುತ್ತಿರುವ ದೃಶ್ಯವನ್ನು ಆತನ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದಾಗ ಬಾಲಕಿಯ ತಾಯಿ ಆರೋಪಿಯ ಮೊಬೈಲ್ ನ್ನು ಎಳೆಯಲು ಪ್ರಯತ್ನಿಸಿದ್ದು ಈ ವೇಳೆ ಆರೋಪಿಯು ಮೊಬೈಲ್ ಎಳೆದುಕೊಂಡು ಪರಾರಿಯಾಗಿರುತ್ತಾನೆ.ಈ ಬಗ್ಗೆ ಆರೋಪಿಯ ತಂದೆಯ ಬಳಿ ಹೇಳಿದ್ದಕ್ಕೆ ದ್ವೇಷದಿಂದ ಹಲ್ಲೆ ನಡೆಸಿದ ಬಗ್ಗೆಯೂ ದೂರು ದಾಖಲಾಗಿದೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…