ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

May 31, 2025
12:05 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಹೇಳಿದ್ದಾರೆ.

Advertisement
Advertisement

ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಇಂದು ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದರು. ಅಕ್ರಮ ಗೋಹತ್ಯೆ ಮತ್ತು ಸಾಗಾಟ, ಮಾದಕ ಪದಾರ್ಥಗಳ ಸಾಗಾಟ ಅಥವಾ ಮಾರಾಟ, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಾ.ಅರುಣ್ ಎಚ್ಚರಿಸಿದರು. ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ ರಾಜ್ಯ ಸರ್ಕಾರ ನಿನ್ನೆ ಜಿಲ್ಲೆಯ ಪ್ರಸಕ್ತ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರನ್ನು ವರ್ಗಾವಣೆ  ಮಾಡಿ ಆದೇಶ ಹೊರಡಿಸಿತ್ತು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |
July 30, 2025
7:35 AM
by: ದ ರೂರಲ್ ಮಿರರ್.ಕಾಂ
ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ
July 30, 2025
7:19 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ
July 29, 2025
8:46 PM
by: The Rural Mirror ಸುದ್ದಿಜಾಲ
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ
July 29, 2025
8:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group