ಪುತ್ತೂರು | ಸರಣಿ ಕಳ್ಳತನ ನಡೆಸಿದ ಅಂತಾರಾಜ್ಯ ಕಳ್ಳ ಪೋಲಿಸ್ ವಶ

October 18, 2022
11:39 AM

ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್‌ ನಿವಾಸಿ ಆರೋಪಿ ಮಹಮ್ಮದ್‌ ಕೆ.ಯು. (42)ಬಂಧಿತ ಆರೋಪಿ.

Advertisement
Advertisement

ಆರೋಪಿ ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್‌ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror