ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್ ನಿವಾಸಿ ಆರೋಪಿ ಮಹಮ್ಮದ್ ಕೆ.ಯು. (42)ಬಂಧಿತ ಆರೋಪಿ.
ಆರೋಪಿ ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…