ಪುತ್ತೂರು ತಾಲೂಕಿನಲ್ಲಿ ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅಂತಾರಾಜ್ಯ ಕಳ್ಳನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕೇರಳದ ಕಣ್ಣೂರು ಜಿಲ್ಲೆಯ ತಲಿಪೆಂಬ ತಾಲೂಕಿನ ಅಲಕೋಡು ಗ್ರಾಮದ ವರಂಬಿಲ್ ನಿವಾಸಿ ಆರೋಪಿ ಮಹಮ್ಮದ್ ಕೆ.ಯು. (42)ಬಂಧಿತ ಆರೋಪಿ.
ಆರೋಪಿ ಕಳೆದ ವರ್ಷ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಿಸರದ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ಎರಡೂವರೆ ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಿಸರಗಳಲ್ಲಿ ಕಳ್ಳತನ ನಡೆಸಿರುವುದು ವಿಚಾರಣೆಯ ವೇಳೆ ಬೆಳಕಿಗೆ ಬಂದಿದೆ.ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ 120 ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…