ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ ಪತ್ತೆಯಾಗಿದೆ.ದೆಹಲಿ ಹಾಗೂ ದೇಶದ ವಿವಿಧ ಕಡೆಯ ಪ್ರಕರಣಗಳು ಚರ್ಚೆಯಾಗುತ್ತಿರುವ ನಡುವೆಯೂ ಸುಳ್ಯದಲ್ಲೂ ಅದೇ ಮಾದರಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel