ಸುದ್ದಿಗಳು

ಸುಳ್ಯ | ಪತ್ನಿಯನ್ನು ಕೊಂದು ಗೋಣಿಯಲ್ಲಿ ತುಂಬಿಸಿದ ಪತಿ | ಪಾಪಿ ಪತಿಯ ಪಾತಕ ಕೃತ್ಯ ಬೆಳಕಿಗೆ….! |

Share

 ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ ಪತ್ತೆಯಾಗಿದೆ.ದೆಹಲಿ ಹಾಗೂ ದೇಶದ ವಿವಿಧ ಕಡೆಯ ಪ್ರಕರಣಗಳು ಚರ್ಚೆಯಾಗುತ್ತಿರುವ ನಡುವೆಯೂ ಸುಳ್ಯದಲ್ಲೂ ಅದೇ ಮಾದರಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

Advertisement

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.

ಇಂದು ಪಕ್ಕದ ರೂಂ ನವರಿಗೆ   ವಾಸನೆ ಬರಲು ಆರಂಭಿಸಿದಾಗ ಸಂಶಯ ಮೂಡಿತು. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎಂಬ ಸಂದೇಹದ ಮೇರೆಗೆ ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಂಕಿತ ಆರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಲೌಡ್‌ ಐರಿಸೇಶನ್‌ | ಅಪರೂಪದ ವಿದ್ಯಮಾನ ಮೋಡದ ವರ್ಣವೈವಿಧ್ಯ |

ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…

1 hour ago

ಹವಾಮಾನ ವರದಿ | 08-04-2025 | ಕೆಲವು ಕಡೆ ಅನಿರೀಕ್ಷಿತ ಮಳೆ ಸಾಧ್ಯತೆ |

ಈಗಿನಂತೆ ವಾತಾವರಣದಲ್ಲಿ ಅಧಿಕ ತೇವಾಂಶ ಹಾಗೂ ವಿಪರೀತ ಸೆಕೆಯ ಕಾರಣ ಕರಾವಳಿಯ ಕೆಲವು…

5 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.ಉಡುಪಿ ಜಿಲ್ಲೆ 93.90% ರಷ್ಟು ಅತಿ ಹೆಚ್ಚು ಉತ್ತೀರ್ಣರಾಗಿದ್ದರೆ,…

5 hours ago

ಷೇರು ಮಾರುಕಟ್ಟೆಯ ಅಸ್ಥಿರತೆ | ಅಡಿಕೆಯ ಮೇಲೆ ಪರಿಣಾಮವಾಗದಂತೆ ಇರಲಿ ಎಚ್ಚರ |

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ ಕಂಡುಬಂದಿದೆ. ಷೇರು ಮಾರುಕಟ್ಟೆ ಹಾಗೂ ಅಡಿಕೆ ಧಾರಣೆಯ ಮೇಲೆ…

5 hours ago

ಪೆಟ್ರೋಲ್,ಡೀಸೆಲ್ ಅಬಕಾರಿ ಸುಂಕ 2 ರೂ. ಹೆಚ್ಚಳ | ಗ್ರಾಹಕರ ಮೇಲೆ ಹೆಚ್ಚಳ ವರ್ಗಾವಣೆ ಇಲ್ಲ

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂಪಾಯಿ ಅಬಕಾರಿ ಸುಂಕ ಏರಿಕೆಯನ್ನು ಗ್ರಾಹಕರ…

9 hours ago

ಧಾರವಾಡ | ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ  ಕ್ರಮವಹಿಸಬೇಕು – ಸಚಿವ ಸಂತೋಷ ಲಾಡ್

ಧಾರವಾಡ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಶುದ್ಧ ಕುಡಿಯುವ ನೀರನ್ನು…

10 hours ago