ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ ಪತ್ತೆಯಾಗಿದೆ.ದೆಹಲಿ ಹಾಗೂ ದೇಶದ ವಿವಿಧ ಕಡೆಯ ಪ್ರಕರಣಗಳು ಚರ್ಚೆಯಾಗುತ್ತಿರುವ ನಡುವೆಯೂ ಸುಳ್ಯದಲ್ಲೂ ಅದೇ ಮಾದರಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.
ಇಂದು ಪಕ್ಕದ ರೂಂ ನವರಿಗೆ ವಾಸನೆ ಬರಲು ಆರಂಭಿಸಿದಾಗ ಸಂಶಯ ಮೂಡಿತು. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎಂಬ ಸಂದೇಹದ ಮೇರೆಗೆ ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಂಕಿತ ಆರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…