ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ ಪತ್ತೆಯಾಗಿದೆ.ದೆಹಲಿ ಹಾಗೂ ದೇಶದ ವಿವಿಧ ಕಡೆಯ ಪ್ರಕರಣಗಳು ಚರ್ಚೆಯಾಗುತ್ತಿರುವ ನಡುವೆಯೂ ಸುಳ್ಯದಲ್ಲೂ ಅದೇ ಮಾದರಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.
ಇಂದು ಪಕ್ಕದ ರೂಂ ನವರಿಗೆ ವಾಸನೆ ಬರಲು ಆರಂಭಿಸಿದಾಗ ಸಂಶಯ ಮೂಡಿತು. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎಂಬ ಸಂದೇಹದ ಮೇರೆಗೆ ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಂಕಿತ ಆರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…