ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ಬೆಳಕಿಗೆ ಬಂದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹವು ಗೋಣಿಯಲ್ಲಿ ತುಂಬಿಸಿದ ರೀತಿಯಲ್ಲಿ ಪತ್ತೆಯಾಗಿದೆ.ದೆಹಲಿ ಹಾಗೂ ದೇಶದ ವಿವಿಧ ಕಡೆಯ ಪ್ರಕರಣಗಳು ಚರ್ಚೆಯಾಗುತ್ತಿರುವ ನಡುವೆಯೂ ಸುಳ್ಯದಲ್ಲೂ ಅದೇ ಮಾದರಿಯ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.
ಇಂದು ಪಕ್ಕದ ರೂಂ ನವರಿಗೆ ವಾಸನೆ ಬರಲು ಆರಂಭಿಸಿದಾಗ ಸಂಶಯ ಮೂಡಿತು. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎಂಬ ಸಂದೇಹದ ಮೇರೆಗೆ ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಂಕಿತ ಆರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…