ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಕಳವು ಪ್ರಕರಣ | ಮೂವರು ಆರೋಪಿಗಳು ಸೆರೆ |

September 14, 2021
8:23 PM

ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಶೀಟ್‌ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಬ್ಬರ್‌ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ಲಾರಿ ಮೇಲೆ ಹಾಕಲಾದ  ಟರ್ಪಾಲ್‌ ಸರಿಸಿ ಲಾರಿಯಲ್ಲಿ ಲೋಡ್‌ ಮಾಡಿದ್ದ ರಬ್ಬರ್‌ ಶೀಟ್‌ಗಳಿರುವ ಬಂಡಲ್‌ಗಳ ಪೈಕಿ ತಲಾ 25 ಕೆ ಜಿ ತೂಕದ ರಬ್ಬರ್‌ ಶೀಟ್‌ಗಳಿರುವ ಸುಮಾರು 35 ಬಂಡಲ್‌ಗಳನ್ನು ಸುಮಾರು 1.45 ಲಕ್ಷ ಮೌಲ್ಯದ ರಬ್ಬರ್ ಕಳವು ಮಾಡಿಕೊಂಡು ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಾಬು ಎಂಬವರು ದೂರು ನೀಡಿದ್ದರು.  ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ತೋಮಸ್, ಇ .ಪಿ ವರ್ಗೀಸ್ , ಶೀನಪ್ಪ ಎಂಬವರನ್ನು  ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಪತ್ತೆಯ ಕಾರ್ಯಾಚರಣೆಯಲ್ಲಿ ಪೊಲೀಸ್‌ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ, ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹಾಗೂ ಉಪ್ಪಿನಂಗಡಿ ಠಾಣಾ ಪಿಎಸ್‌ಐ ಕುಮಾರ್ ಕಾಂಬ್ಳೆ, ಸಿಬ್ಬಂಧಿಗಳಾದ ಎಎಸ್ಐ ಸೀತಾರಾಮ ಗೌಡ, ಮತ್ತು ಸಿಬ್ಬಂದಿಗಳಾದ  ಹಿತೋಷ್ ಕುಮಾರ್,  ಕೃಷ್ಣಪ್ಪ ನಾಯ್ಕ , ಯೋಗರಾಜ್  ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror