ಸುದ್ದಿಗಳು

ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಕಳವು ಪ್ರಕರಣ | ಮೂವರು ಆರೋಪಿಗಳು ಸೆರೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಶೀಟ್‌ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ರಬ್ಬರ್‌ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ಲಾರಿ ಮೇಲೆ ಹಾಕಲಾದ  ಟರ್ಪಾಲ್‌ ಸರಿಸಿ ಲಾರಿಯಲ್ಲಿ ಲೋಡ್‌ ಮಾಡಿದ್ದ ರಬ್ಬರ್‌ ಶೀಟ್‌ಗಳಿರುವ ಬಂಡಲ್‌ಗಳ ಪೈಕಿ ತಲಾ 25 ಕೆ ಜಿ ತೂಕದ ರಬ್ಬರ್‌ ಶೀಟ್‌ಗಳಿರುವ ಸುಮಾರು 35 ಬಂಡಲ್‌ಗಳನ್ನು ಸುಮಾರು 1.45 ಲಕ್ಷ ಮೌಲ್ಯದ ರಬ್ಬರ್ ಕಳವು ಮಾಡಿಕೊಂಡು ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಾಬು ಎಂಬವರು ದೂರು ನೀಡಿದ್ದರು.  ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ತೋಮಸ್, ಇ .ಪಿ ವರ್ಗೀಸ್ , ಶೀನಪ್ಪ ಎಂಬವರನ್ನು  ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಪತ್ತೆಯ ಕಾರ್ಯಾಚರಣೆಯಲ್ಲಿ ಪೊಲೀಸ್‌ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ, ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹಾಗೂ ಉಪ್ಪಿನಂಗಡಿ ಠಾಣಾ ಪಿಎಸ್‌ಐ ಕುಮಾರ್ ಕಾಂಬ್ಳೆ, ಸಿಬ್ಬಂಧಿಗಳಾದ ಎಎಸ್ಐ ಸೀತಾರಾಮ ಗೌಡ, ಮತ್ತು ಸಿಬ್ಬಂದಿಗಳಾದ  ಹಿತೋಷ್ ಕುಮಾರ್,  ಕೃಷ್ಣಪ್ಪ ನಾಯ್ಕ , ಯೋಗರಾಜ್  ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

11 hours ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

14 hours ago

ಗುಡುಗು ಸಿಡಿಲಿನ ಮುನ್ಸೂಚನೆ ಬಗ್ಗೆ ಆಪ್‌ನಲ್ಲಿ ಮಾಹಿತಿ

ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…

14 hours ago

ಸತತ ಸೋಲಿನ ಬಳಿಕ ಪುಟಿದೇಳುವರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಹೊಸರುಚಿ | ಗುಜ್ಜೆ ಸುಕ್ಕಾ

ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ ಚಿಕ್ಕ ದಾಗಿ ಕಟ್…

16 hours ago

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

2 days ago