ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರಬ್ಬರ್ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ಲಾರಿ ಮೇಲೆ ಹಾಕಲಾದ ಟರ್ಪಾಲ್ ಸರಿಸಿ ಲಾರಿಯಲ್ಲಿ ಲೋಡ್ ಮಾಡಿದ್ದ ರಬ್ಬರ್ ಶೀಟ್ಗಳಿರುವ ಬಂಡಲ್ಗಳ ಪೈಕಿ ತಲಾ 25 ಕೆ ಜಿ ತೂಕದ ರಬ್ಬರ್ ಶೀಟ್ಗಳಿರುವ ಸುಮಾರು 35 ಬಂಡಲ್ಗಳನ್ನು ಸುಮಾರು 1.45 ಲಕ್ಷ ಮೌಲ್ಯದ ರಬ್ಬರ್ ಕಳವು ಮಾಡಿಕೊಂಡು ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಾಬು ಎಂಬವರು ದೂರು ನೀಡಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ತೋಮಸ್, ಇ .ಪಿ ವರ್ಗೀಸ್ , ಶೀನಪ್ಪ ಎಂಬವರನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.
ಪ್ರಕರಣದ ಪತ್ತೆಯ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ, ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹಾಗೂ ಉಪ್ಪಿನಂಗಡಿ ಠಾಣಾ ಪಿಎಸ್ಐ ಕುಮಾರ್ ಕಾಂಬ್ಳೆ, ಸಿಬ್ಬಂಧಿಗಳಾದ ಎಎಸ್ಐ ಸೀತಾರಾಮ ಗೌಡ, ಮತ್ತು ಸಿಬ್ಬಂದಿಗಳಾದ ಹಿತೋಷ್ ಕುಮಾರ್, ಕೃಷ್ಣಪ್ಪ ನಾಯ್ಕ , ಯೋಗರಾಜ್ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…