Advertisement
ಸುದ್ದಿಗಳು

ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಕಳವು ಪ್ರಕರಣ | ಮೂವರು ಆರೋಪಿಗಳು ಸೆರೆ |

Share

ಕಡಬ ತಾಲೂಕು ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್‌ ಶೀಟ್‌ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಬ್ಬರ್‌ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಿಲ್ಲಿಸಲಾಗಿತ್ತು. ನಿಲ್ಲಿಸಿದ್ದ ಲಾರಿ ಮೇಲೆ ಹಾಕಲಾದ  ಟರ್ಪಾಲ್‌ ಸರಿಸಿ ಲಾರಿಯಲ್ಲಿ ಲೋಡ್‌ ಮಾಡಿದ್ದ ರಬ್ಬರ್‌ ಶೀಟ್‌ಗಳಿರುವ ಬಂಡಲ್‌ಗಳ ಪೈಕಿ ತಲಾ 25 ಕೆ ಜಿ ತೂಕದ ರಬ್ಬರ್‌ ಶೀಟ್‌ಗಳಿರುವ ಸುಮಾರು 35 ಬಂಡಲ್‌ಗಳನ್ನು ಸುಮಾರು 1.45 ಲಕ್ಷ ಮೌಲ್ಯದ ರಬ್ಬರ್ ಕಳವು ಮಾಡಿಕೊಂಡು ಮಾಡಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಬಾಬು ಎಂಬವರು ದೂರು ನೀಡಿದ್ದರು.  ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳನ್ನು ತೋಮಸ್, ಇ .ಪಿ ವರ್ಗೀಸ್ , ಶೀನಪ್ಪ ಎಂಬವರನ್ನು  ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಪ್ರಕರಣದ ಪತ್ತೆಯ ಕಾರ್ಯಾಚರಣೆಯಲ್ಲಿ ಪೊಲೀಸ್‌ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ದ.ಕ ಜಿಲ್ಲೆ ಮಂಗಳೂರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ, ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಹಾಗೂ ಉಪ್ಪಿನಂಗಡಿ ಠಾಣಾ ಪಿಎಸ್‌ಐ ಕುಮಾರ್ ಕಾಂಬ್ಳೆ, ಸಿಬ್ಬಂಧಿಗಳಾದ ಎಎಸ್ಐ ಸೀತಾರಾಮ ಗೌಡ, ಮತ್ತು ಸಿಬ್ಬಂದಿಗಳಾದ  ಹಿತೋಷ್ ಕುಮಾರ್,  ಕೃಷ್ಣಪ್ಪ ನಾಯ್ಕ , ಯೋಗರಾಜ್  ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

14 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

21 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago