ರಕ್ತಚಂದನ ದಿಮ್ಮಿಗಳನ್ನು ತಮಿಳುನಾಡಿಗೆ ಸಾಗಿಸುತ್ತಿದ್ದ ಗ್ಯಾಂಗನ್ನು ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಿದ್ಧರಾಜು, ಪ್ರಜ್ವಲ, ಲೋಕೇಶ, ದೇವರಾಜ್, ಗೋವಿಂದ ಸ್ವಾಮಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಪೊಲೀಸರ ಕಣ್ತಪ್ಪಿಸಲು ರಕ್ತಚಂದನ ಮರದ ಮೇಲೆ ಟೊಮ್ಯಾಟೊ ಬಾಕ್ಸ್ ಹಾಕಿ ಬೊಲೇರೋ ವಾಹನದಲ್ಲಿ ಸಾಗಿಸುತ್ತಿದ್ದರು.
ಮಂಡ್ಯದ ದೇವಲಾಪುರ ಕಾಡಿನಿಂದ ರಕ್ತಚಂದನ ಮರಗಳನ್ನು ಕಳ್ಳತನ ಮಾಡಿ ತಮಿಳುನಾಡು ಭಾಗಕ್ಕೆ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನೂ ಬಂಧಿತರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ 1.5 ಟನ್ ರಕ್ತಚಂದನ ದಿಮ್ಮಿಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…