Advertisement
MIRROR FOCUS

ರಬ್ಬರ್‌ ಬೆಳೆಗಾರರ ಸಂಕಷ್ಟ | ಲೋಕಸಭೆಯಲ್ಲಿ ಧ್ವನಿ ಎತ್ತಿದ ಕೇರಳದ ಸಂಸದ | 250 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಒತ್ತಾಯ |

Share

ಕಳೆದ ಕೆಲವು ಸಮಯಗಳಿಂದ ರಬ್ಬರ್‌ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಧಾರಣೆ ಕುಸಿತದ ಕಾರಣದಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಕೇರಳದ ಕೊಟ್ಟಾಯಂನ ಸಂಸದ ಥಾಮಸ್ ಚಾಜಿಕಡನ್ ಸಂಸತ್ತಿನಲ್ಲಿ ರಬ್ಬರ್‌ ಬೆಳೆಗಾರರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ.ಪ್ರತಿ ಕೆಜಿಗೆ ಕನಿಷ್ಠ ₹ 250 ಬೆಂಬಲ ಬೆಲೆಯನ್ನು ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಇದೀಗ ರಬ್ಬರ್ ಬೆಳೆಗಾರರ ಸಮಸ್ಯೆಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಲು ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ಕಳೆದ ತಿಂಗಳು ಪ್ರತಿಭಟನೆ ನಡೆದಿದೆ. ರಬ್ಬರ್‌ ಧಾರಣೆ ಕುಸಿತವಾಗಿರುವ ಕಾರಣದಿಂದ ಅನೇಕ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆದಿತ್ತು.  ಕೇಋಲ , ತ್ರಿಪುರಾ, ತಮಿಳುನಾಡು ಹಾಗೂ ಕರ್ನಾಟಕವನ್ನು ಒಳಗೊಂದು ರೈತ ಸಂಸ್ಥೆಯು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ರಬ್ಬರ್‌ ಧಾರಣೆ ಏರಿಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿತ್ತು. ರಬ್ಬರ್‌ ಆಮದು ಸ್ಥಗಿತಗೊಳಿಸಬೇಕು ಸಹಿತ ಸಹಿತ ಬೇಡಿಕೆಗಳನ್ನು ಮುಂದಿಡಲಾಗಿತ್ತು.

Advertisement

ಇದೀಗ ಕೇರಳದ ಕೊಟ್ಟಾಯಂನ ಸಂಸದ ಥಾಮಸ್ ಚಾಜಿಕಡನ್, ನೈಸರ್ಗಿಕ ರಬ್ಬರ್ ಬೆಳೆಯನ್ನು ಕೃಷಿ ಬೆಳೆ ಎಂದು ಘೋಷಿಸಲು ಮತ್ತು ಪ್ರತಿ ಕೆಜಿಗೆ ಕನಿಷ್ಠ ₹ 250 ಬೆಂಬಲ ಬೆಲೆಯನ್ನು ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.  ಕೇಂದ್ರ ಸರ್ಕಾರವು ಕೈಗಾರಿಕಾ ಕಚ್ಚಾ ವಸ್ತುವಾದ ಸೆಣಬನ್ನು ಕೃಷಿ ಉತ್ಪನ್ನವೆಂದು ಘೋಷಿಸಿ ಬೆಂಬಲ ಬೆಲೆ ಯೋಜನೆಯಲ್ಲಿ ಹೇಗೆ ಸೇರಿಸಿದೆ, ಅದೇ ಮಾದರಿಯಲ್ಲಿ ರಬ್ಬರ್‌ ಕೂಡಾ ಸೇರಿಸಬೇಕು ಎಂದು ಒತ್ತಾಯಿಸಿದರು. ನೈಸರ್ಗಿಕ ರಬ್ಬರ್, ಕೃಷಿ ಬೆಳೆ, ಕೈಗಾರಿಕೆಗಳಿಗೆ ಕಚ್ಚಾ ವಸ್ತುವಾಗಿದೆ ಎಂದು ಅವರು ಹೇಳಿದರು.

ರಬ್ಬರ್‌ ಬೆಳೆಗಾರರು ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಉತ್ಪನ್ನ ಪಡೆದರೆ ಮಾತ್ರ ಕೃಷಿಯನ್ನು ಲಾಭದಾಯಕವಾಗಿ ನಡೆಸಬಹುದು ಎಂಬ ಸ್ವಾಮಿನಾಥನ್ ಆಯೋಗದ ವರದಿಯನ್ನು ಉಲ್ಲೇಖಿಸಿದ ಸಂಸದರು, ರಬ್ಬರ್‌ಗೆ ₹250 ಬೆಂಬಲ ಬೆಲೆ ಘೋಷಣೆ ಮಾಡಬೇಕು. ಸದ್ಯ  ರಬ್ಬರ್‌ನ ಉತ್ಪಾದನಾ ವೆಚ್ಚವು  ಕೆಜಿಗೆ ₹ 172 ರಷ್ಟಿದೆ ಎಂದೂ ಅವರು ಉಲ್ಲೇಖಿಸಿದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

3 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

5 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

19 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

19 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

19 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

19 hours ago