Advertisement
MIRROR FOCUS

ರಬ್ಬರ್‌ ಬೆಳೆಗಾರರ ಸಂಕಷ್ಟ | ಲೋಕಸಭೆಯಲ್ಲಿ ಧ್ವನಿ ಎತ್ತಿದ ಕೇರಳದ ಸಂಸದ | 250 ರೂಪಾಯಿ ಬೆಂಬಲ ಬೆಲೆ ನಿಗದಿಗೆ ಒತ್ತಾಯ |

Share

ಕಳೆದ ಕೆಲವು ಸಮಯಗಳಿಂದ ರಬ್ಬರ್‌ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಧಾರಣೆ ಕುಸಿತದ ಕಾರಣದಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಕೇರಳದ ಕೊಟ್ಟಾಯಂನ ಸಂಸದ ಥಾಮಸ್ ಚಾಜಿಕಡನ್ ಸಂಸತ್ತಿನಲ್ಲಿ ರಬ್ಬರ್‌ ಬೆಳೆಗಾರರ ಪರವಾಗಿ ಧ್ವನಿ ಎತ್ತುತ್ತಿದ್ದಾರೆ.ಪ್ರತಿ ಕೆಜಿಗೆ ಕನಿಷ್ಠ ₹ 250 ಬೆಂಬಲ ಬೆಲೆಯನ್ನು ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಇದೀಗ ರಬ್ಬರ್ ಬೆಳೆಗಾರರ ಸಮಸ್ಯೆಯನ್ನು ರಾಷ್ಟ್ರಮಟ್ಟದಲ್ಲಿ ಎತ್ತಲು ಪ್ರಯತ್ನಗಳು ನಡೆಯುತ್ತಿವೆ. ಈಗಾಗಲೇ ಕಳೆದ ತಿಂಗಳು ಪ್ರತಿಭಟನೆ ನಡೆದಿದೆ. ರಬ್ಬರ್‌ ಧಾರಣೆ ಕುಸಿತವಾಗಿರುವ ಕಾರಣದಿಂದ ಅನೇಕ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದು ದೆಹಲಿಯಲ್ಲಿ ಪ್ರತಿಭಟನೆ ನಡೆದಿತ್ತು.  ಕೇಋಲ , ತ್ರಿಪುರಾ, ತಮಿಳುನಾಡು ಹಾಗೂ ಕರ್ನಾಟಕವನ್ನು ಒಳಗೊಂದು ರೈತ ಸಂಸ್ಥೆಯು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ರಬ್ಬರ್‌ ಧಾರಣೆ ಏರಿಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿತ್ತು. ರಬ್ಬರ್‌ ಆಮದು ಸ್ಥಗಿತಗೊಳಿಸಬೇಕು ಸಹಿತ ಸಹಿತ ಬೇಡಿಕೆಗಳನ್ನು ಮುಂದಿಡಲಾಗಿತ್ತು.

ಇದೀಗ ಕೇರಳದ ಕೊಟ್ಟಾಯಂನ ಸಂಸದ ಥಾಮಸ್ ಚಾಜಿಕಡನ್, ನೈಸರ್ಗಿಕ ರಬ್ಬರ್ ಬೆಳೆಯನ್ನು ಕೃಷಿ ಬೆಳೆ ಎಂದು ಘೋಷಿಸಲು ಮತ್ತು ಪ್ರತಿ ಕೆಜಿಗೆ ಕನಿಷ್ಠ ₹ 250 ಬೆಂಬಲ ಬೆಲೆಯನ್ನು ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.  ಕೇಂದ್ರ ಸರ್ಕಾರವು ಕೈಗಾರಿಕಾ ಕಚ್ಚಾ ವಸ್ತುವಾದ ಸೆಣಬನ್ನು ಕೃಷಿ ಉತ್ಪನ್ನವೆಂದು ಘೋಷಿಸಿ ಬೆಂಬಲ ಬೆಲೆ ಯೋಜನೆಯಲ್ಲಿ ಹೇಗೆ ಸೇರಿಸಿದೆ, ಅದೇ ಮಾದರಿಯಲ್ಲಿ ರಬ್ಬರ್‌ ಕೂಡಾ ಸೇರಿಸಬೇಕು ಎಂದು ಒತ್ತಾಯಿಸಿದರು. ನೈಸರ್ಗಿಕ ರಬ್ಬರ್, ಕೃಷಿ ಬೆಳೆ, ಕೈಗಾರಿಕೆಗಳಿಗೆ ಕಚ್ಚಾ ವಸ್ತುವಾಗಿದೆ ಎಂದು ಅವರು ಹೇಳಿದರು.

ರಬ್ಬರ್‌ ಬೆಳೆಗಾರರು ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಉತ್ಪನ್ನ ಪಡೆದರೆ ಮಾತ್ರ ಕೃಷಿಯನ್ನು ಲಾಭದಾಯಕವಾಗಿ ನಡೆಸಬಹುದು ಎಂಬ ಸ್ವಾಮಿನಾಥನ್ ಆಯೋಗದ ವರದಿಯನ್ನು ಉಲ್ಲೇಖಿಸಿದ ಸಂಸದರು, ರಬ್ಬರ್‌ಗೆ ₹250 ಬೆಂಬಲ ಬೆಲೆ ಘೋಷಣೆ ಮಾಡಬೇಕು. ಸದ್ಯ  ರಬ್ಬರ್‌ನ ಉತ್ಪಾದನಾ ವೆಚ್ಚವು  ಕೆಜಿಗೆ ₹ 172 ರಷ್ಟಿದೆ ಎಂದೂ ಅವರು ಉಲ್ಲೇಖಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

13 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

18 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

18 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

21 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

21 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

22 hours ago