ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಎನ್ಡಿಆರ್ಎಫ್/ಎಸ್ಡಿಆರ್ಎಫ್ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಗೆ ಮಳೆಯಾಶ್ರಿತ 8 ಸಾವಿರದ 500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22 ಸಾವಿರ 500 ರೂಪಾಯಿ ಗಳಂತೆ ಬೆಳೆ ಹಾನಿಯಾದ ರೈತರಿಗೆ 10 ಹಂತಗಳಲ್ಲಿ ಒಟ್ಟು 1 ಲಕ್ಷದ 76 ಸಾವಿರದ 382 ರೈತರಿಗೆ 127 ಕೋಟಿ 16 ಲಕ್ಷ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8 ಸಾವಿರದ 500 ರೂಪಾಯಿಗಳನ್ನು 7 ಹಂತಗಳಲ್ಲಿ ಒಟ್ಟು 1 ಲಕ್ಷದ 86 ಸಾವಿರದ 426 ರೈತರಿಗೆ 134 ಕೋಟಿ 27 ಲಕ್ಷ ರೂಪಾಯಿಗಳ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ ಎಂದು ಅವರು ತಿಳಿಸಿದರು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…