ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಎನ್ಡಿಆರ್ಎಫ್/ಎಸ್ಡಿಆರ್ಎಫ್ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಗೆ ಮಳೆಯಾಶ್ರಿತ 8 ಸಾವಿರದ 500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22 ಸಾವಿರ 500 ರೂಪಾಯಿ ಗಳಂತೆ ಬೆಳೆ ಹಾನಿಯಾದ ರೈತರಿಗೆ 10 ಹಂತಗಳಲ್ಲಿ ಒಟ್ಟು 1 ಲಕ್ಷದ 76 ಸಾವಿರದ 382 ರೈತರಿಗೆ 127 ಕೋಟಿ 16 ಲಕ್ಷ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8 ಸಾವಿರದ 500 ರೂಪಾಯಿಗಳನ್ನು 7 ಹಂತಗಳಲ್ಲಿ ಒಟ್ಟು 1 ಲಕ್ಷದ 86 ಸಾವಿರದ 426 ರೈತರಿಗೆ 134 ಕೋಟಿ 27 ಲಕ್ಷ ರೂಪಾಯಿಗಳ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ ಎಂದು ಅವರು ತಿಳಿಸಿದರು.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…