ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಎನ್ಡಿಆರ್ಎಫ್/ಎಸ್ಡಿಆರ್ಎಫ್ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಗೆ ಮಳೆಯಾಶ್ರಿತ 8 ಸಾವಿರದ 500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22 ಸಾವಿರ 500 ರೂಪಾಯಿ ಗಳಂತೆ ಬೆಳೆ ಹಾನಿಯಾದ ರೈತರಿಗೆ 10 ಹಂತಗಳಲ್ಲಿ ಒಟ್ಟು 1 ಲಕ್ಷದ 76 ಸಾವಿರದ 382 ರೈತರಿಗೆ 127 ಕೋಟಿ 16 ಲಕ್ಷ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8 ಸಾವಿರದ 500 ರೂಪಾಯಿಗಳನ್ನು 7 ಹಂತಗಳಲ್ಲಿ ಒಟ್ಟು 1 ಲಕ್ಷದ 86 ಸಾವಿರದ 426 ರೈತರಿಗೆ 134 ಕೋಟಿ 27 ಲಕ್ಷ ರೂಪಾಯಿಗಳ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ ಎಂದು ಅವರು ತಿಳಿಸಿದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…