ಬೀದರ್ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಎನ್ಡಿಆರ್ಎಫ್/ಎಸ್ಡಿಆರ್ಎಫ್ ಮಾರ್ಗಸೂಚಿಯನ್ವಯ ಪ್ರತಿ ಹೆಕ್ಟೇರಗೆ ಮಳೆಯಾಶ್ರಿತ 8 ಸಾವಿರದ 500 ರೂಪಾಯಿ, ನೀರಾವರಿ ಬೆಳೆಗೆ 17 ಸಾವಿರ ರೂಪಾಯಿ ಮತ್ತು ಬಹುವಾರ್ಷಿಕ ಬೆಳೆಗಳಿಗೆ 22 ಸಾವಿರ 500 ರೂಪಾಯಿ ಗಳಂತೆ ಬೆಳೆ ಹಾನಿಯಾದ ರೈತರಿಗೆ 10 ಹಂತಗಳಲ್ಲಿ ಒಟ್ಟು 1 ಲಕ್ಷದ 76 ಸಾವಿರದ 382 ರೈತರಿಗೆ 127 ಕೋಟಿ 16 ಲಕ್ಷ ರೂಪಾಯಿ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆ ಜಮೆ ಮಾಡಲಾಗಿದೆ. ಎಂದು ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ಘೋಷಿಸಲಾದ ಹೆಚ್ಚುವರಿ ಪರಿಹಾರ ಮೊತ್ತ 8 ಸಾವಿರದ 500 ರೂಪಾಯಿಗಳನ್ನು 7 ಹಂತಗಳಲ್ಲಿ ಒಟ್ಟು 1 ಲಕ್ಷದ 86 ಸಾವಿರದ 426 ರೈತರಿಗೆ 134 ಕೋಟಿ 27 ಲಕ್ಷ ರೂಪಾಯಿಗಳ ಪರಿಹಾರ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 8615 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಇನ್ನೂ ಬರಬೇಕಿದೆ ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…