ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂಪಾಯಿ ಪರಿಹಾರ ಸೇರಿದಂತೆ ಒಟ್ಟಾರೆ 300 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರವನ್ನು ಇದೇ 30 ರೊಳಗೆ ಪಾವತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ಹಾನಿ ಪ್ರದೇಶದ ತಹಶೀಲ್ದಾರರು ಪರಿಹಾರದ ಪೋರ್ಟಲ್ನಲ್ಲಿ ಹಾನಿಯ ಪ್ರಮಾಣವನ್ನು ಕಡ್ಡಾಯವಾಗಿ ದಾಖಲಿಸಿ, ಪರಿಹಾರ ನೀಡಿಕೆಗೆ ನಾಳೆಯೊಳಗೆ ತುರ್ತು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ನಿಯಮದಂತೆ 170 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ಪಾವತಿಸಲಾಗುತ್ತಿದೆ. ಇದೇ 30 ರೊಳಗೆ 300 ಕೋಟಿ ರೂಪಾಯಿ ಪರಿಹಾರ ಮೊತ್ತ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಜೀವಹಾನಿ, ಬೆಳೆಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡುವುದಾಗಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ ಹಗಲಿರುಳು ಶ್ರಮಿಸಿ, ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರ ನೆರವಿಗೆ ಧಾವಿಸಬೇಕು ಎಂದು ಆದೇಶ ನೀಡಿದರು. ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸುವ ಪ್ರತಿಯೊಂದು ಮಾಹಿತಿಯನ್ನೂ ಗ್ರಾಮಪಂಚಾಯ್ತಿ, ತಹಶೀಲ್ದಾರರ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಬಹಿರಂಗವಾಗಿ ಪ್ರಕಟಿಸುವಂತೆ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…