Advertisement
MIRROR FOCUS

ಬೆಳೆ ಹಾನಿ ಪರಿಹಾರ ಅಕ್ಟೋಬರ್ 30 ರೊಳಗೆ ಪಾವತಿ

Share

ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂಪಾಯಿ ಪರಿಹಾರ ಸೇರಿದಂತೆ ಒಟ್ಟಾರೆ 300 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರವನ್ನು ಇದೇ 30 ರೊಳಗೆ ಪಾವತಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ಬೀದರ್ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ಹಾನಿ ಪ್ರದೇಶದ ತಹಶೀಲ್ದಾರರು ಪರಿಹಾರದ ಪೋರ್ಟಲ್‌ನಲ್ಲಿ ಹಾನಿಯ ಪ್ರಮಾಣವನ್ನು ಕಡ್ಡಾಯವಾಗಿ ದಾಖಲಿಸಿ, ಪರಿಹಾರ ನೀಡಿಕೆಗೆ ನಾಳೆಯೊಳಗೆ ತುರ್ತು ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು. ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್. ನಿಯಮದಂತೆ 170 ಕೋಟಿ ರೂಪಾಯಿ ಪರಿಹಾರವನ್ನು ಈಗಾಗಲೇ ಪಾವತಿಸಲಾಗುತ್ತಿದೆ. ಇದೇ 30 ರೊಳಗೆ 300 ಕೋಟಿ ರೂಪಾಯಿ ಪರಿಹಾರ ಮೊತ್ತ ಪಾವತಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Advertisement

ಸಭೆಯಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಜೀವಹಾನಿ, ಬೆಳೆಹಾನಿ, ಮನೆ ಹಾನಿ, ಜಾನುವಾರು ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡುವುದಾಗಿ ಪ್ರಕಟಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ ಹಗಲಿರುಳು ಶ್ರಮಿಸಿ, ವಿಕೋಪದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬದವರ ನೆರವಿಗೆ ಧಾವಿಸಬೇಕು ಎಂದು ಆದೇಶ ನೀಡಿದರು. ಮಳೆ ಹಾನಿಗೆ ಸಂಬಂಧಿಸಿದಂತೆ ಪರಿಹಾರ ಪೋರ್ಟಲ್ ನಲ್ಲಿ ದಾಖಲಿಸುವ ಪ್ರತಿಯೊಂದು ಮಾಹಿತಿಯನ್ನೂ ಗ್ರಾಮಪಂಚಾಯ್ತಿ, ತಹಶೀಲ್ದಾರರ ಕಚೇರಿ ಮತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಬಹಿರಂಗವಾಗಿ ಪ್ರಕಟಿಸುವಂತೆ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

18 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

19 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago