MIRROR FOCUS

#Drought | ಬರದಿಂದ ರಾಜ್ಯದ ಬರೋಬ್ಬರಿ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ | ಸಚಿವ ಕೃಷ್ಣಭೈರೇಗೌಡ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಿದೆ. ರೈತರು, ಜನಸಾಮಾನ್ಯರ ಬದುಕು ಬಹಳ ಕಷ್ಟಕರವಾಗಿದೆ.  ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ತಿಳಿಸಿದ್ದಾರೆ.

Advertisement

ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ವಿವರಿಸಿದ್ದಾರೆ.

ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೇವು, ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರ ಪಡೆಯಲು ಅವಕಾಶವಿದ್ದು, ಹೀಗಾಗಿ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ವಾರಾಂತ್ಯದೊಳಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕೇಂದ್ರದ ಬರ ಮಾರ್ಗಸೂಚಿಯಂತೆ 161 ತಾಲೂಕುಗಳಲ್ಲಿ ತೀವ್ರ ಬರವಿದ್ದು, 34ರಲ್ಲಿ ಭಾಗಶಃ ಬರವಿದೆ. ಉಳಿದ 41 ತಾಲೂಕುಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಮಾರ್ಗಸೂಚಿ ಪ್ರಕಾರ ಅಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯ ಕುರಿತು ಈ ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದಿದ್ದಾರೆ.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

10 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

11 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

20 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

21 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

23 hours ago