Advertisement
MIRROR FOCUS

#Drought | ಬರದಿಂದ ರಾಜ್ಯದ ಬರೋಬ್ಬರಿ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ | ಸಚಿವ ಕೃಷ್ಣಭೈರೇಗೌಡ |

Share

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಿದೆ. ರೈತರು, ಜನಸಾಮಾನ್ಯರ ಬದುಕು ಬಹಳ ಕಷ್ಟಕರವಾಗಿದೆ.  ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ತಿಳಿಸಿದ್ದಾರೆ.

ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ವಿವರಿಸಿದ್ದಾರೆ.

ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೇವು, ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರ ಪಡೆಯಲು ಅವಕಾಶವಿದ್ದು, ಹೀಗಾಗಿ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ವಾರಾಂತ್ಯದೊಳಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕೇಂದ್ರದ ಬರ ಮಾರ್ಗಸೂಚಿಯಂತೆ 161 ತಾಲೂಕುಗಳಲ್ಲಿ ತೀವ್ರ ಬರವಿದ್ದು, 34ರಲ್ಲಿ ಭಾಗಶಃ ಬರವಿದೆ. ಉಳಿದ 41 ತಾಲೂಕುಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಮಾರ್ಗಸೂಚಿ ಪ್ರಕಾರ ಅಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯ ಕುರಿತು ಈ ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದಿದ್ದಾರೆ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

6 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

11 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

20 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

21 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago