Advertisement
MIRROR FOCUS

#Drought | ಬರದಿಂದ ರಾಜ್ಯದ ಬರೋಬ್ಬರಿ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ | ಸಚಿವ ಕೃಷ್ಣಭೈರೇಗೌಡ |

Share

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಿದೆ. ರೈತರು, ಜನಸಾಮಾನ್ಯರ ಬದುಕು ಬಹಳ ಕಷ್ಟಕರವಾಗಿದೆ.  ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ತಿಳಿಸಿದ್ದಾರೆ.

ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ವಿವರಿಸಿದ್ದಾರೆ.

ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೇವು, ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರ ಪಡೆಯಲು ಅವಕಾಶವಿದ್ದು, ಹೀಗಾಗಿ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ವಾರಾಂತ್ಯದೊಳಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕೇಂದ್ರದ ಬರ ಮಾರ್ಗಸೂಚಿಯಂತೆ 161 ತಾಲೂಕುಗಳಲ್ಲಿ ತೀವ್ರ ಬರವಿದ್ದು, 34ರಲ್ಲಿ ಭಾಗಶಃ ಬರವಿದೆ. ಉಳಿದ 41 ತಾಲೂಕುಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಮಾರ್ಗಸೂಚಿ ಪ್ರಕಾರ ಅಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯ ಕುರಿತು ಈ ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದಿದ್ದಾರೆ.

Source : Digital Media

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

7 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

14 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

22 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

22 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago