Advertisement
MIRROR FOCUS

#Drought | ಬರದಿಂದ ರಾಜ್ಯದ ಬರೋಬ್ಬರಿ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ | ಸಚಿವ ಕೃಷ್ಣಭೈರೇಗೌಡ |

Share

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಿದೆ. ರೈತರು, ಜನಸಾಮಾನ್ಯರ ಬದುಕು ಬಹಳ ಕಷ್ಟಕರವಾಗಿದೆ.  ರಾಜ್ಯದಲ್ಲಿ ಬರದಿಂದ ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಮತ್ತು ಎರಡು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದ್ದು, 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು  ತಿಳಿಸಿದ್ದಾರೆ.

ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಒಂದು ವಾರದೊಳಗೆ ಮನವಿ ಪತ್ರ ಸಲ್ಲಿಸಲಾಗುವುದು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಯಮಗಳ ಪ್ರಕಾರ ಒಟ್ಟು 5000 ರಿಂದ 6000 ಕೋಟಿ ರೂಪಾಯಿ ಪರಿಹಾರ ಪಡೆಯಲು ಅವಕಾಶವಿದೆ ಎಂದು ಸಚಿವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಈ ವರ್ಷ ತೀವ್ರ ಮಳೆಯ ಕೊರತೆ ಉಂಟಾಗಿದ್ದು, ಈಗಾಗಲೇ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅಂದಾಜು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದು, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ವಿವರಿಸಿದ್ದಾರೆ.

ಬರಪೀಡಿತ ತಾಲೂಕುಗಳಿಗೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸಲ್ಲಿಸಬೇಕಾದ ಮನವಿ ಪತ್ರವನ್ನು ತ್ವರಿತವಾಗಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಮೇವು, ಕುಡಿಯುವ ನೀರಿಗೆ ಪ್ರತ್ಯೇಕ ಪರಿಹಾರ ಪಡೆಯಲು ಅವಕಾಶವಿದ್ದು, ಹೀಗಾಗಿ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದು ವಾರಾಂತ್ಯದೊಳಗೆ ಮನವಿ ಸಲ್ಲಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕೇಂದ್ರದ ಬರ ಮಾರ್ಗಸೂಚಿಯಂತೆ 161 ತಾಲೂಕುಗಳಲ್ಲಿ ತೀವ್ರ ಬರವಿದ್ದು, 34ರಲ್ಲಿ ಭಾಗಶಃ ಬರವಿದೆ. ಉಳಿದ 41 ತಾಲೂಕುಗಳಲ್ಲಿಯೂ ಪರಿಸ್ಥಿತಿ ಭಿನ್ನವಾಗಿಲ್ಲ. ಆದರೆ ಮಾರ್ಗಸೂಚಿ ಪ್ರಕಾರ ಅಲ್ಲಿ ಬರ ಘೋಷಣೆ ಮಾಡಲು ಸಾಧ್ಯವಿಲ್ಲ. ಈ ತಾಲೂಕುಗಳಲ್ಲಿನ ಬರ ಪರಿಸ್ಥಿತಿಯ ಕುರಿತು ಈ ತಿಂಗಳ ಅಂತ್ಯದಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದಿದ್ದಾರೆ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

11 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago