ಅತಿವೃಷ್ಟಿಯಿಂದ ರಾಜ್ಯದಲ್ಲಿ 5.20 ಲಕ್ಷ ಹೆಕ್ಟೇರ್ ಬೆಳೆ ಹಾನಿ

September 9, 2025
6:17 AM

ರಾಜ್ಯದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ  ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 5.20 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 550 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಪ್ರಾಥಮಿಕ ಸಮೀಕ್ಷೆಯಂತೆ 4,80,256 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 40,407 ಹೆಕ್ಟೇರ್‌ ತೋಟಗಾರಿಕಾ ಬೆಳೆ ಸೇರಿ ಒಟ್ಟು 5,20,663 ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಸದ್ಯಕ್ಕೆ 550 ಕೋಟಿ ರೂ. ಬೆಳೆ ನಷ್ಟ ಅಂದಾಜು ಮಾಡಲಾಗಿದೆ. ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಬೆಳೆ ನಷ್ಟ ಪರಿಹಾರ ವಿತರಣೆ ಆರಂಭವಾಗಲಿದ್ದು, ಆದಷ್ಟು ಶೀಘ್ರ ಪರಿಹಾರ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,’ ಎಂದು ಹೇಳಿದರು.

ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ  ಶೇಕಡ 98ರಷ್ಟು ಬಿತ್ತನೆ ಪೂರ್ಣಗೊಂಡಿದೆ.  ಬಿತ್ತನೆ ಗುರಿ 82. 50ಲಕ್ಷ ಹೆಕ್ಟೇರ್ ಇದ್ದು, ಈವರೆಗೆ 80.76 ಹೆಕ್ಟೇರ್ ನಲ್ಲಿ ಬಿತ್ತನೆಯಾಗಿದೆ.  ಮಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು  ಎಂದು ತಿಳಿಸಿದರು. ಮಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು ಎಂದ ಅವರು, ಮಳೆಯಿಂದ  ಕಳೆದ  ಏಪ್ರಿಲ್ ನಿಂದ ಈವರೆಗೆ 111 ಮಂದಿ ಸಾವನ್ನಪ್ಪಿದ್ದು, ಎಲ್ಲ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. 651 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಈ ಪೈಕಿ  8608 ಮನೆಗಳಿಗೆ ಪರಿಹಾರ ನೀಡಲಾಗಿದೆ. ಈ ಅವಧಿಯಲ್ಲಿ 766 ಜಾನುವಾರುಗಳು ಸಾವನ್ನಪ್ಪಿದ್ದು, 1.52 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror