ರಾಜ್ಯದಲ್ಲಿ ಅತಿವೃಷ್ಠಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ 5.20 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 550 ಕೋಟಿ ರೂ. ನಷ್ಟ ಅಂದಾಜಿಸಲಾಗಿದೆ. ಪ್ರಾಥಮಿಕ ಸಮೀಕ್ಷೆಯಂತೆ 4,80,256 ಹೆಕ್ಟೇರ್ ಕೃಷಿ ಬೆಳೆ ಹಾಗೂ 40,407 ಹೆಕ್ಟೇರ್ ತೋಟಗಾರಿಕಾ ಬೆಳೆ ಸೇರಿ ಒಟ್ಟು 5,20,663 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಸದ್ಯಕ್ಕೆ 550 ಕೋಟಿ ರೂ. ಬೆಳೆ ನಷ್ಟ ಅಂದಾಜು ಮಾಡಲಾಗಿದೆ. ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಬೆಳೆ ನಷ್ಟ ಪರಿಹಾರ ವಿತರಣೆ ಆರಂಭವಾಗಲಿದ್ದು, ಆದಷ್ಟು ಶೀಘ್ರ ಪರಿಹಾರ ವಿತರಣೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,’ ಎಂದು ಹೇಳಿದರು.
ಮಳೆಯಿಂದ ಹಾನಿಗೀಡಾಗಿರುವ ಬೆಳೆ, ಮನೆಗಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿನಲ್ಲಿ ಶೇಕಡ 98ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಬಿತ್ತನೆ ಗುರಿ 82. 50ಲಕ್ಷ ಹೆಕ್ಟೇರ್ ಇದ್ದು, ಈವರೆಗೆ 80.76 ಹೆಕ್ಟೇರ್ ನಲ್ಲಿ ಬಿತ್ತನೆಯಾಗಿದೆ. ಮಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು ಎಂದು ತಿಳಿಸಿದರು. ಮಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ನಡೆಸಬೇಕು ಎಂದ ಅವರು, ಮಳೆಯಿಂದ ಕಳೆದ ಏಪ್ರಿಲ್ ನಿಂದ ಈವರೆಗೆ 111 ಮಂದಿ ಸಾವನ್ನಪ್ಪಿದ್ದು, ಎಲ್ಲ ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. 651 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 9087 ಮನೆಗಳು ಭಾಗಶಃ ಹಾನಿಯಾಗಿವೆ. ಈ ಪೈಕಿ 8608 ಮನೆಗಳಿಗೆ ಪರಿಹಾರ ನೀಡಲಾಗಿದೆ. ಈ ಅವಧಿಯಲ್ಲಿ 766 ಜಾನುವಾರುಗಳು ಸಾವನ್ನಪ್ಪಿದ್ದು, 1.52 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…