ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

June 26, 2021
3:25 PM

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು ಕೆಲಸ ಮಾಡುತ್ತಿದ್ದಾರೆ. ಜೂ.30  ಬೆಳೆ ವಿಮೆ ಮಾಡಿಸಲು ಕೊನೆಯ ದಿನವಾದರೆ ಸಹಕಾರಿ ಸಂಘಗಳು ಮುಂದಿನ  15 ದಿನಗಳ ಒಳಗಾಗಿ ವೆಬ್‌ ಸೈಟ್‌ ಗೆ ಅಪ್ ಲೋಡ್‌ ಮಾಡಲು ಕಾಲಾವಕಾಶ ಇದೆ.

Advertisement

ಇಂತಹದ್ದೊಂದು ಮಾಹಿತಿ ಕ್ಲಬ್‌ ಹೌಸ್‌ ಸಂವಾದಲ್ಲಿ  ಶುಕ್ರವಾರ ಲಭ್ಯವಾಗಿದೆ.

Agriculuturist  ಬಳಗದ ವತಿಯಿಂದ ಕಳೆದ ಕೆಲವು ದಿನಗಳಿಂದ ಕ್ಲಬ್‌ ಹೌಸ್‌ ನಲ್ಲಿ ಕೃಷಿ ವಿಚಾರವಾಗಿ ವಿಚಾರವಿನಿಮಯ ನಡೆಯುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಪ್ರಮುಖರು ಮಾಹಿತಿ ನೀಡುತ್ತಿದ್ದಾರೆ. ಶುಕ್ರವಾರ ಬೆಳೆವಿಮಯ ಅಗತ್ಯತೆ, ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಯಿತು.ವಿವಿಧ ಸಹಕಾರಿ ಸಂಘಗಳ ಸಿಇಒ ಹಾಗೂ ಅಧ್ಯಕ್ಷರುಗಳು , ನಿರ್ದೇಶಕರು , ಸಿ ಎಸ್‌ ಸಿ ಕೇಂದ್ರದ ಪ್ರಮುಖರು, ಕೃಷಿಕರು ಹಾಗೂ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಭಾಗವಹಿಸಿದ್ದರು.

ಬೆಳೆ ವಿಮೆಯ ಅಗತ್ಯತೆಯ ಬಗ್ಗೆ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಅವರು  ಮಾಹಿತಿ ನೀಡಿದರು. ಈ ಸಂದರ್ಭ ಸಹಕಾರಿ ಸಂಘಗಳಲ್ಲಿನ ಸಮಸ್ಯೆಯ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಸರಕಾರ ಇದೇ ಜೂನ್ 30 ರ ಒಳಗಾಗಿ ಬೆಳೆ ವಿಮೆ ಮಾಡಿಸಬೇಕೆಂದು ಗಡುವು ನೀಡಿರುತ್ತದೆ .ಇದರ ಜೊತೆ ಎಲ್ಲಾ ಬೆಳೆ ವಿಮೆ ಪಾವತಿ ಯನ್ನು ಕೂಡ ಸಂಬಂಧಪಟ್ಟ ವಿಮಾ ಕಂಪೆನಿಗೆ  ನಮ್ಮ ಸಂಘದಿಂದ ಜೂನ್ 30 ರ ಒಳಗೆ ಅಪ್ ಲೋಡ್ ಮಾಡಬೇಕೆಂದು ಕೂಡಾ ಗಡುವು ನೀಡಿದೆ, ಆದರೆ ಈ ಬಾರಿಯ ನಿಯಮದಂತೆ ಪ್ರತೀ ಸರ್ವೆ ನಂಬರ್‌ ದಾಖಲು ಮಾಡಬೇಕಾದ್ದರಿಂದ ತಡವಾಗುತ್ತಿದೆ, ನೆಟ್ವರ್ಕ್‌ ಸಮಸ್ಯೆ ಕೂಡಾ ಇರುವುರಿಂದ  ಅಪ್‌ ಲೋಡ್‌ ಆಗದೇ ಇರುವುದು ಗೊಂದಲಕ್ಕೆ ಕಾರಣವಾಗಿತ್ತು.

ಇಂತಹ ಯಾವುದೇ ಗೊಂದಲಗಳು ಅಗತ್ಯವಿಲ್ಲ, ಸಹಕಾರಿ ಸಂಘಗಳು  ಜೂನ್ 30 ರ ಒಳಗೆ ಬೆಳೆ ವಿಮೆ ಅರ್ಜಿ ಪಡೆದು ಮುಂದಿನ  15  ದಿನಗಳ ಒಳಗಾಗಿ ಅಪ್‌ ಲೋಡ್‌ ಮಾಡಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಾಶ್‌ ಅವರು ಮಾಹಿತಿ ನೀಡಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ
April 20, 2025
8:03 AM
by: The Rural Mirror ಸುದ್ದಿಜಾಲ
ಮನೆಗೆ 4 ರಿಂದ 6 ಬಾಗಿಲುಗಳು ಇದ್ದರೆ ಏನೆಲ್ಲಾ ಪ್ರಯೋಜನಗಳಿವೆ ..? ಹೀಗಿವೆ ಶುಭ, ಅಶುಭ ಫಲಗಳು
April 20, 2025
7:24 AM
by: ದ ರೂರಲ್ ಮಿರರ್.ಕಾಂ
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ ಆರೋಪ | ಶಿಕ್ಷಣ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು
April 19, 2025
7:42 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ | ತೋಟಗಾರಿಕಾ ಬೆಳೆ ನಾಶ
April 19, 2025
7:33 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group