MIRROR FOCUS

ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು ಕೆಲಸ ಮಾಡುತ್ತಿದ್ದಾರೆ. ಜೂ.30  ಬೆಳೆ ವಿಮೆ ಮಾಡಿಸಲು ಕೊನೆಯ ದಿನವಾದರೆ ಸಹಕಾರಿ ಸಂಘಗಳು ಮುಂದಿನ  15 ದಿನಗಳ ಒಳಗಾಗಿ ವೆಬ್‌ ಸೈಟ್‌ ಗೆ ಅಪ್ ಲೋಡ್‌ ಮಾಡಲು ಕಾಲಾವಕಾಶ ಇದೆ.

Advertisement

ಇಂತಹದ್ದೊಂದು ಮಾಹಿತಿ ಕ್ಲಬ್‌ ಹೌಸ್‌ ಸಂವಾದಲ್ಲಿ  ಶುಕ್ರವಾರ ಲಭ್ಯವಾಗಿದೆ.

Agriculuturist  ಬಳಗದ ವತಿಯಿಂದ ಕಳೆದ ಕೆಲವು ದಿನಗಳಿಂದ ಕ್ಲಬ್‌ ಹೌಸ್‌ ನಲ್ಲಿ ಕೃಷಿ ವಿಚಾರವಾಗಿ ವಿಚಾರವಿನಿಮಯ ನಡೆಯುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಪ್ರಮುಖರು ಮಾಹಿತಿ ನೀಡುತ್ತಿದ್ದಾರೆ. ಶುಕ್ರವಾರ ಬೆಳೆವಿಮಯ ಅಗತ್ಯತೆ, ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಯಿತು.ವಿವಿಧ ಸಹಕಾರಿ ಸಂಘಗಳ ಸಿಇಒ ಹಾಗೂ ಅಧ್ಯಕ್ಷರುಗಳು , ನಿರ್ದೇಶಕರು , ಸಿ ಎಸ್‌ ಸಿ ಕೇಂದ್ರದ ಪ್ರಮುಖರು, ಕೃಷಿಕರು ಹಾಗೂ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಭಾಗವಹಿಸಿದ್ದರು.

ಬೆಳೆ ವಿಮೆಯ ಅಗತ್ಯತೆಯ ಬಗ್ಗೆ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಅವರು  ಮಾಹಿತಿ ನೀಡಿದರು. ಈ ಸಂದರ್ಭ ಸಹಕಾರಿ ಸಂಘಗಳಲ್ಲಿನ ಸಮಸ್ಯೆಯ ಬಗ್ಗೆಯೂ ಮಾತುಕತೆ ನಡೆಸಲಾಯಿತು.

Advertisement

ಸರಕಾರ ಇದೇ ಜೂನ್ 30 ರ ಒಳಗಾಗಿ ಬೆಳೆ ವಿಮೆ ಮಾಡಿಸಬೇಕೆಂದು ಗಡುವು ನೀಡಿರುತ್ತದೆ .ಇದರ ಜೊತೆ ಎಲ್ಲಾ ಬೆಳೆ ವಿಮೆ ಪಾವತಿ ಯನ್ನು ಕೂಡ ಸಂಬಂಧಪಟ್ಟ ವಿಮಾ ಕಂಪೆನಿಗೆ  ನಮ್ಮ ಸಂಘದಿಂದ ಜೂನ್ 30 ರ ಒಳಗೆ ಅಪ್ ಲೋಡ್ ಮಾಡಬೇಕೆಂದು ಕೂಡಾ ಗಡುವು ನೀಡಿದೆ, ಆದರೆ ಈ ಬಾರಿಯ ನಿಯಮದಂತೆ ಪ್ರತೀ ಸರ್ವೆ ನಂಬರ್‌ ದಾಖಲು ಮಾಡಬೇಕಾದ್ದರಿಂದ ತಡವಾಗುತ್ತಿದೆ, ನೆಟ್ವರ್ಕ್‌ ಸಮಸ್ಯೆ ಕೂಡಾ ಇರುವುರಿಂದ  ಅಪ್‌ ಲೋಡ್‌ ಆಗದೇ ಇರುವುದು ಗೊಂದಲಕ್ಕೆ ಕಾರಣವಾಗಿತ್ತು.

ಇಂತಹ ಯಾವುದೇ ಗೊಂದಲಗಳು ಅಗತ್ಯವಿಲ್ಲ, ಸಹಕಾರಿ ಸಂಘಗಳು  ಜೂನ್ 30 ರ ಒಳಗೆ ಬೆಳೆ ವಿಮೆ ಅರ್ಜಿ ಪಡೆದು ಮುಂದಿನ  15  ದಿನಗಳ ಒಳಗಾಗಿ ಅಪ್‌ ಲೋಡ್‌ ಮಾಡಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಾಶ್‌ ಅವರು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ

ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಪೂರೈಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ…

8 hours ago

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

8 hours ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

9 hours ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

9 hours ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

9 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…

10 hours ago