Advertisement
MIRROR FOCUS

ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

Share

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು ಕೆಲಸ ಮಾಡುತ್ತಿದ್ದಾರೆ. ಜೂ.30  ಬೆಳೆ ವಿಮೆ ಮಾಡಿಸಲು ಕೊನೆಯ ದಿನವಾದರೆ ಸಹಕಾರಿ ಸಂಘಗಳು ಮುಂದಿನ  15 ದಿನಗಳ ಒಳಗಾಗಿ ವೆಬ್‌ ಸೈಟ್‌ ಗೆ ಅಪ್ ಲೋಡ್‌ ಮಾಡಲು ಕಾಲಾವಕಾಶ ಇದೆ.

ಇಂತಹದ್ದೊಂದು ಮಾಹಿತಿ ಕ್ಲಬ್‌ ಹೌಸ್‌ ಸಂವಾದಲ್ಲಿ  ಶುಕ್ರವಾರ ಲಭ್ಯವಾಗಿದೆ.

Agriculuturist  ಬಳಗದ ವತಿಯಿಂದ ಕಳೆದ ಕೆಲವು ದಿನಗಳಿಂದ ಕ್ಲಬ್‌ ಹೌಸ್‌ ನಲ್ಲಿ ಕೃಷಿ ವಿಚಾರವಾಗಿ ವಿಚಾರವಿನಿಮಯ ನಡೆಯುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಪ್ರಮುಖರು ಮಾಹಿತಿ ನೀಡುತ್ತಿದ್ದಾರೆ. ಶುಕ್ರವಾರ ಬೆಳೆವಿಮಯ ಅಗತ್ಯತೆ, ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಯಿತು.ವಿವಿಧ ಸಹಕಾರಿ ಸಂಘಗಳ ಸಿಇಒ ಹಾಗೂ ಅಧ್ಯಕ್ಷರುಗಳು , ನಿರ್ದೇಶಕರು , ಸಿ ಎಸ್‌ ಸಿ ಕೇಂದ್ರದ ಪ್ರಮುಖರು, ಕೃಷಿಕರು ಹಾಗೂ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಭಾಗವಹಿಸಿದ್ದರು.

ಬೆಳೆ ವಿಮೆಯ ಅಗತ್ಯತೆಯ ಬಗ್ಗೆ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಅವರು  ಮಾಹಿತಿ ನೀಡಿದರು. ಈ ಸಂದರ್ಭ ಸಹಕಾರಿ ಸಂಘಗಳಲ್ಲಿನ ಸಮಸ್ಯೆಯ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಸರಕಾರ ಇದೇ ಜೂನ್ 30 ರ ಒಳಗಾಗಿ ಬೆಳೆ ವಿಮೆ ಮಾಡಿಸಬೇಕೆಂದು ಗಡುವು ನೀಡಿರುತ್ತದೆ .ಇದರ ಜೊತೆ ಎಲ್ಲಾ ಬೆಳೆ ವಿಮೆ ಪಾವತಿ ಯನ್ನು ಕೂಡ ಸಂಬಂಧಪಟ್ಟ ವಿಮಾ ಕಂಪೆನಿಗೆ  ನಮ್ಮ ಸಂಘದಿಂದ ಜೂನ್ 30 ರ ಒಳಗೆ ಅಪ್ ಲೋಡ್ ಮಾಡಬೇಕೆಂದು ಕೂಡಾ ಗಡುವು ನೀಡಿದೆ, ಆದರೆ ಈ ಬಾರಿಯ ನಿಯಮದಂತೆ ಪ್ರತೀ ಸರ್ವೆ ನಂಬರ್‌ ದಾಖಲು ಮಾಡಬೇಕಾದ್ದರಿಂದ ತಡವಾಗುತ್ತಿದೆ, ನೆಟ್ವರ್ಕ್‌ ಸಮಸ್ಯೆ ಕೂಡಾ ಇರುವುರಿಂದ  ಅಪ್‌ ಲೋಡ್‌ ಆಗದೇ ಇರುವುದು ಗೊಂದಲಕ್ಕೆ ಕಾರಣವಾಗಿತ್ತು.

ಇಂತಹ ಯಾವುದೇ ಗೊಂದಲಗಳು ಅಗತ್ಯವಿಲ್ಲ, ಸಹಕಾರಿ ಸಂಘಗಳು  ಜೂನ್ 30 ರ ಒಳಗೆ ಬೆಳೆ ವಿಮೆ ಅರ್ಜಿ ಪಡೆದು ಮುಂದಿನ  15  ದಿನಗಳ ಒಳಗಾಗಿ ಅಪ್‌ ಲೋಡ್‌ ಮಾಡಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಾಶ್‌ ಅವರು ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago