Advertisement
MIRROR FOCUS

ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

Share

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು ಕೆಲಸ ಮಾಡುತ್ತಿದ್ದಾರೆ. ಜೂ.30  ಬೆಳೆ ವಿಮೆ ಮಾಡಿಸಲು ಕೊನೆಯ ದಿನವಾದರೆ ಸಹಕಾರಿ ಸಂಘಗಳು ಮುಂದಿನ  15 ದಿನಗಳ ಒಳಗಾಗಿ ವೆಬ್‌ ಸೈಟ್‌ ಗೆ ಅಪ್ ಲೋಡ್‌ ಮಾಡಲು ಕಾಲಾವಕಾಶ ಇದೆ.

Advertisement

ಇಂತಹದ್ದೊಂದು ಮಾಹಿತಿ ಕ್ಲಬ್‌ ಹೌಸ್‌ ಸಂವಾದಲ್ಲಿ  ಶುಕ್ರವಾರ ಲಭ್ಯವಾಗಿದೆ.

Agriculuturist  ಬಳಗದ ವತಿಯಿಂದ ಕಳೆದ ಕೆಲವು ದಿನಗಳಿಂದ ಕ್ಲಬ್‌ ಹೌಸ್‌ ನಲ್ಲಿ ಕೃಷಿ ವಿಚಾರವಾಗಿ ವಿಚಾರವಿನಿಮಯ ನಡೆಯುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಪ್ರಮುಖರು ಮಾಹಿತಿ ನೀಡುತ್ತಿದ್ದಾರೆ. ಶುಕ್ರವಾರ ಬೆಳೆವಿಮಯ ಅಗತ್ಯತೆ, ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಯಿತು.ವಿವಿಧ ಸಹಕಾರಿ ಸಂಘಗಳ ಸಿಇಒ ಹಾಗೂ ಅಧ್ಯಕ್ಷರುಗಳು , ನಿರ್ದೇಶಕರು , ಸಿ ಎಸ್‌ ಸಿ ಕೇಂದ್ರದ ಪ್ರಮುಖರು, ಕೃಷಿಕರು ಹಾಗೂ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಭಾಗವಹಿಸಿದ್ದರು.

ಬೆಳೆ ವಿಮೆಯ ಅಗತ್ಯತೆಯ ಬಗ್ಗೆ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಅವರು  ಮಾಹಿತಿ ನೀಡಿದರು. ಈ ಸಂದರ್ಭ ಸಹಕಾರಿ ಸಂಘಗಳಲ್ಲಿನ ಸಮಸ್ಯೆಯ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಸರಕಾರ ಇದೇ ಜೂನ್ 30 ರ ಒಳಗಾಗಿ ಬೆಳೆ ವಿಮೆ ಮಾಡಿಸಬೇಕೆಂದು ಗಡುವು ನೀಡಿರುತ್ತದೆ .ಇದರ ಜೊತೆ ಎಲ್ಲಾ ಬೆಳೆ ವಿಮೆ ಪಾವತಿ ಯನ್ನು ಕೂಡ ಸಂಬಂಧಪಟ್ಟ ವಿಮಾ ಕಂಪೆನಿಗೆ  ನಮ್ಮ ಸಂಘದಿಂದ ಜೂನ್ 30 ರ ಒಳಗೆ ಅಪ್ ಲೋಡ್ ಮಾಡಬೇಕೆಂದು ಕೂಡಾ ಗಡುವು ನೀಡಿದೆ, ಆದರೆ ಈ ಬಾರಿಯ ನಿಯಮದಂತೆ ಪ್ರತೀ ಸರ್ವೆ ನಂಬರ್‌ ದಾಖಲು ಮಾಡಬೇಕಾದ್ದರಿಂದ ತಡವಾಗುತ್ತಿದೆ, ನೆಟ್ವರ್ಕ್‌ ಸಮಸ್ಯೆ ಕೂಡಾ ಇರುವುರಿಂದ  ಅಪ್‌ ಲೋಡ್‌ ಆಗದೇ ಇರುವುದು ಗೊಂದಲಕ್ಕೆ ಕಾರಣವಾಗಿತ್ತು.

ಇಂತಹ ಯಾವುದೇ ಗೊಂದಲಗಳು ಅಗತ್ಯವಿಲ್ಲ, ಸಹಕಾರಿ ಸಂಘಗಳು  ಜೂನ್ 30 ರ ಒಳಗೆ ಬೆಳೆ ವಿಮೆ ಅರ್ಜಿ ಪಡೆದು ಮುಂದಿನ  15  ದಿನಗಳ ಒಳಗಾಗಿ ಅಪ್‌ ಲೋಡ್‌ ಮಾಡಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಾಶ್‌ ಅವರು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

5 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

11 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

21 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

21 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago