Advertisement
MIRROR FOCUS

ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

Share

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು ಕೆಲಸ ಮಾಡುತ್ತಿದ್ದಾರೆ. ಜೂ.30  ಬೆಳೆ ವಿಮೆ ಮಾಡಿಸಲು ಕೊನೆಯ ದಿನವಾದರೆ ಸಹಕಾರಿ ಸಂಘಗಳು ಮುಂದಿನ  15 ದಿನಗಳ ಒಳಗಾಗಿ ವೆಬ್‌ ಸೈಟ್‌ ಗೆ ಅಪ್ ಲೋಡ್‌ ಮಾಡಲು ಕಾಲಾವಕಾಶ ಇದೆ.

ಇಂತಹದ್ದೊಂದು ಮಾಹಿತಿ ಕ್ಲಬ್‌ ಹೌಸ್‌ ಸಂವಾದಲ್ಲಿ  ಶುಕ್ರವಾರ ಲಭ್ಯವಾಗಿದೆ.

Agriculuturist  ಬಳಗದ ವತಿಯಿಂದ ಕಳೆದ ಕೆಲವು ದಿನಗಳಿಂದ ಕ್ಲಬ್‌ ಹೌಸ್‌ ನಲ್ಲಿ ಕೃಷಿ ವಿಚಾರವಾಗಿ ವಿಚಾರವಿನಿಮಯ ನಡೆಯುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಪ್ರಮುಖರು ಮಾಹಿತಿ ನೀಡುತ್ತಿದ್ದಾರೆ. ಶುಕ್ರವಾರ ಬೆಳೆವಿಮಯ ಅಗತ್ಯತೆ, ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಯಿತು.ವಿವಿಧ ಸಹಕಾರಿ ಸಂಘಗಳ ಸಿಇಒ ಹಾಗೂ ಅಧ್ಯಕ್ಷರುಗಳು , ನಿರ್ದೇಶಕರು , ಸಿ ಎಸ್‌ ಸಿ ಕೇಂದ್ರದ ಪ್ರಮುಖರು, ಕೃಷಿಕರು ಹಾಗೂ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಭಾಗವಹಿಸಿದ್ದರು.

ಬೆಳೆ ವಿಮೆಯ ಅಗತ್ಯತೆಯ ಬಗ್ಗೆ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಅವರು  ಮಾಹಿತಿ ನೀಡಿದರು. ಈ ಸಂದರ್ಭ ಸಹಕಾರಿ ಸಂಘಗಳಲ್ಲಿನ ಸಮಸ್ಯೆಯ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಸರಕಾರ ಇದೇ ಜೂನ್ 30 ರ ಒಳಗಾಗಿ ಬೆಳೆ ವಿಮೆ ಮಾಡಿಸಬೇಕೆಂದು ಗಡುವು ನೀಡಿರುತ್ತದೆ .ಇದರ ಜೊತೆ ಎಲ್ಲಾ ಬೆಳೆ ವಿಮೆ ಪಾವತಿ ಯನ್ನು ಕೂಡ ಸಂಬಂಧಪಟ್ಟ ವಿಮಾ ಕಂಪೆನಿಗೆ  ನಮ್ಮ ಸಂಘದಿಂದ ಜೂನ್ 30 ರ ಒಳಗೆ ಅಪ್ ಲೋಡ್ ಮಾಡಬೇಕೆಂದು ಕೂಡಾ ಗಡುವು ನೀಡಿದೆ, ಆದರೆ ಈ ಬಾರಿಯ ನಿಯಮದಂತೆ ಪ್ರತೀ ಸರ್ವೆ ನಂಬರ್‌ ದಾಖಲು ಮಾಡಬೇಕಾದ್ದರಿಂದ ತಡವಾಗುತ್ತಿದೆ, ನೆಟ್ವರ್ಕ್‌ ಸಮಸ್ಯೆ ಕೂಡಾ ಇರುವುರಿಂದ  ಅಪ್‌ ಲೋಡ್‌ ಆಗದೇ ಇರುವುದು ಗೊಂದಲಕ್ಕೆ ಕಾರಣವಾಗಿತ್ತು.

ಇಂತಹ ಯಾವುದೇ ಗೊಂದಲಗಳು ಅಗತ್ಯವಿಲ್ಲ, ಸಹಕಾರಿ ಸಂಘಗಳು  ಜೂನ್ 30 ರ ಒಳಗೆ ಬೆಳೆ ವಿಮೆ ಅರ್ಜಿ ಪಡೆದು ಮುಂದಿನ  15  ದಿನಗಳ ಒಳಗಾಗಿ ಅಪ್‌ ಲೋಡ್‌ ಮಾಡಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಾಶ್‌ ಅವರು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

8 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

10 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

11 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago