Advertisement
MIRROR FOCUS

ಜೂ.30 ಬೆಳೆ ವಿಮೆ ಮಾಡಿಸಲು ಕೊನೆಯ ದಿನ | ಸಹಕಾರಿ ಸಂಘಗಳಲ್ಲಿ ಹೆಚ್ಚಿದ ಒತ್ತಡ | ಸಹಕಾರಿ ಸಂಘಗಳಿಗೆ 15 ದಿನಗಳ ಕಾಲಾವಕಾಶ |

Share

ಈಗ ಬೆಳೆವಿಮೆಯ ತುರ್ತಿನಲ್ಲಿ ಸಹಕಾರಿ ಸಂಘಗಳು ಕೆಲಸ ಮಾಡುತ್ತಿವೆ. ತಡರಾತ್ರಿಯವರೆಗೂ ಇದೇ ಕೆಲಸದಲ್ಲಿ  ಸಿಬಂದಿಗಳು ನಿರತರಾಗಿದ್ದಾರೆ. ಬೆಳೆಗಾರರ, ಕೃಷಿಕರ ಹಿತಕ್ಕಾಗಿ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳಲ್ಲಿ  ಸಿಬಂದಿಗಳು ಕೆಲಸ ಮಾಡುತ್ತಿದ್ದಾರೆ. ಜೂ.30  ಬೆಳೆ ವಿಮೆ ಮಾಡಿಸಲು ಕೊನೆಯ ದಿನವಾದರೆ ಸಹಕಾರಿ ಸಂಘಗಳು ಮುಂದಿನ  15 ದಿನಗಳ ಒಳಗಾಗಿ ವೆಬ್‌ ಸೈಟ್‌ ಗೆ ಅಪ್ ಲೋಡ್‌ ಮಾಡಲು ಕಾಲಾವಕಾಶ ಇದೆ.

ಇಂತಹದ್ದೊಂದು ಮಾಹಿತಿ ಕ್ಲಬ್‌ ಹೌಸ್‌ ಸಂವಾದಲ್ಲಿ  ಶುಕ್ರವಾರ ಲಭ್ಯವಾಗಿದೆ.

Agriculuturist  ಬಳಗದ ವತಿಯಿಂದ ಕಳೆದ ಕೆಲವು ದಿನಗಳಿಂದ ಕ್ಲಬ್‌ ಹೌಸ್‌ ನಲ್ಲಿ ಕೃಷಿ ವಿಚಾರವಾಗಿ ವಿಚಾರವಿನಿಮಯ ನಡೆಯುತ್ತಿದೆ. ಇದಕ್ಕೆ ಆಯಾ ಕ್ಷೇತ್ರದ ಪ್ರಮುಖರು ಮಾಹಿತಿ ನೀಡುತ್ತಿದ್ದಾರೆ. ಶುಕ್ರವಾರ ಬೆಳೆವಿಮಯ ಅಗತ್ಯತೆ, ಸಮಸ್ಯೆಗಳು ಹಾಗೂ ಪರಿಹಾರಗಳ ಬಗ್ಗೆ ಸಂವಾದ ನಡೆಯಿತು.ವಿವಿಧ ಸಹಕಾರಿ ಸಂಘಗಳ ಸಿಇಒ ಹಾಗೂ ಅಧ್ಯಕ್ಷರುಗಳು , ನಿರ್ದೇಶಕರು , ಸಿ ಎಸ್‌ ಸಿ ಕೇಂದ್ರದ ಪ್ರಮುಖರು, ಕೃಷಿಕರು ಹಾಗೂ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಭಾಗವಹಿಸಿದ್ದರು.

ಬೆಳೆ ವಿಮೆಯ ಅಗತ್ಯತೆಯ ಬಗ್ಗೆ ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಅವರು  ಮಾಹಿತಿ ನೀಡಿದರು. ಈ ಸಂದರ್ಭ ಸಹಕಾರಿ ಸಂಘಗಳಲ್ಲಿನ ಸಮಸ್ಯೆಯ ಬಗ್ಗೆಯೂ ಮಾತುಕತೆ ನಡೆಸಲಾಯಿತು.

ಸರಕಾರ ಇದೇ ಜೂನ್ 30 ರ ಒಳಗಾಗಿ ಬೆಳೆ ವಿಮೆ ಮಾಡಿಸಬೇಕೆಂದು ಗಡುವು ನೀಡಿರುತ್ತದೆ .ಇದರ ಜೊತೆ ಎಲ್ಲಾ ಬೆಳೆ ವಿಮೆ ಪಾವತಿ ಯನ್ನು ಕೂಡ ಸಂಬಂಧಪಟ್ಟ ವಿಮಾ ಕಂಪೆನಿಗೆ  ನಮ್ಮ ಸಂಘದಿಂದ ಜೂನ್ 30 ರ ಒಳಗೆ ಅಪ್ ಲೋಡ್ ಮಾಡಬೇಕೆಂದು ಕೂಡಾ ಗಡುವು ನೀಡಿದೆ, ಆದರೆ ಈ ಬಾರಿಯ ನಿಯಮದಂತೆ ಪ್ರತೀ ಸರ್ವೆ ನಂಬರ್‌ ದಾಖಲು ಮಾಡಬೇಕಾದ್ದರಿಂದ ತಡವಾಗುತ್ತಿದೆ, ನೆಟ್ವರ್ಕ್‌ ಸಮಸ್ಯೆ ಕೂಡಾ ಇರುವುರಿಂದ  ಅಪ್‌ ಲೋಡ್‌ ಆಗದೇ ಇರುವುದು ಗೊಂದಲಕ್ಕೆ ಕಾರಣವಾಗಿತ್ತು.

ಇಂತಹ ಯಾವುದೇ ಗೊಂದಲಗಳು ಅಗತ್ಯವಿಲ್ಲ, ಸಹಕಾರಿ ಸಂಘಗಳು  ಜೂನ್ 30 ರ ಒಳಗೆ ಬೆಳೆ ವಿಮೆ ಅರ್ಜಿ ಪಡೆದು ಮುಂದಿನ  15  ದಿನಗಳ ಒಳಗಾಗಿ ಅಪ್‌ ಲೋಡ್‌ ಮಾಡಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಾಶ್‌ ಅವರು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago