ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…