ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…