ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…