ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಎರಡು ವರ್ಷಗಳ ಹಿಂದೆ (03-04-2022 ರಿಂದ 06-04-2022), ಗೋಕೃಪಾಮೃತ ವಿತರಣೆ ಕಾರ್ಯಕ್ರಮ ಕೃಷಿಕ…
ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…
ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…
ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…
ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…