ಮುಂಗಾರು ಮಳೆಯ ಪೂರ್ವದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಮೂಲಕ ಕೃಷಿಕರು ಬೆಳೆ ವಿಮೆಯ ಹಣ ಪಾವತಿ ಮಾಡಿದ್ದರು. ಇದೀಗ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಳೆಯಾದ ಕಾರಣದಿಂದ ಪರಿಹಾರದ ಹಣವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಖಾತೆಗೆ ಜಮೆಯಾಗಲು ಆರಂಭಗೊಂಡಿದೆ. ಕೇಂದ್ರ ಸರ್ಕಾರವು ಕೃಷಿಕರ ಬೆಳೆ ಭದ್ರತೆಗಾಗಿ ವಿಮಾ ಕಂಪನಿಗಳ ಮೂಲಕ ಬೆಳೆ ವಿಮೆಯನ್ನು ರೈತರಿಂದ ಮಾಡಿಸಿತ್ತು. ಈ ಬಾರಿ ಕೂಡಾ ಬೆಳೆ ವಿಮೆಗೆ ಕೃಷಿಕರು ಸಹಕಾರಿ ಸಂಘಗಳ ಮೂಲಕ ಅಥವಾ ಖಾಸಗಿಯಾಗಿ ಹಣ ಪಾವತಿ ಮಾಡಿದ್ದರು. ಇದೀಗ ಹವಾಮಾನ ಆಧಾರಿತವಾಗಿ ಬೆಳೆ ವಿಮೆಗೆ ಹಣ ಪಾವತಿ ಆರಂಭವಾಗಿದೆ. ರೈತರು ಬೆಳೆ ವಿಮೆಯ ಸಂದರ್ಭ ನೀಡಿದ್ದ ಬ್ಯಾಂಕ್ ಖಾತೆಗೆ ಅಥವಾ ಆಧಾರ್ ಜೊತೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತದೆ. ರೈತರಿಗೆ ಹಣ ಜಮೆಯಾದ ತಕ್ಷಣವೇ ಮೆಸೇಜ್ ಬರುತ್ತದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…