Advertisement
ಸುದ್ದಿಗಳು

ಕೃಷಿಕರು ಗಮನಿಸಿ | ಹವಾಮಾನ ಆಧಾರಿತ ಬೆಳೆ ವಿಮೆ | ವಿಮಾ ಕಂತು ಪಾವತಿಸಲು ಜೂನ್ 30 ಅಂತಿಮ ದಿನ |

Share
News Summary
ಹವಾಮಾನ ಆಧಾರಿತ ಬೆಳೆ ವಿಮೆಗೆ ಚಾಲನೆ | ಜೂ.30 ಕೊನೆಯ ದಿನ ವಿಮಾ ಕಂತು ಪಾವತಿಗೆ |

ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ  ಮುಂಗಾರು ಹಂಗಾಮಿಗೆ ಅನ್ವಯಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅನುಷ್ಟಾನಗೊಳಿಸಲು ಅಧಿಸೂಚಿಸಲಾಗಿದೆ.2022ರ ಮುಂಗಾರು ಹಂಗಾಮಿಗೆ ಸಂಬಂಧಿಸಿ ವಿಮಾ ಕಂತು ಪಾವತಿಸಲು ಜೂನ್ 30 ಅಂತಿಮ ದಿನವಾಗಿದೆ ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯು ಅಧಿಸೂಚಿತ ಬೆಳೆಗಳಿಗೆ ರಾಷ್ಟ್ರೀಕೃತ, ಖಾಸಗಿ ಹಾಗೂ ಸಹಕಾರಿ ಬ್ಯಾಂಕ್ ಗಳಿಂದ ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರಿಗೆ ಐಚ್ಚಿಕವಾಗಿರುತ್ತದೆ. ಈ ಯೋಜನೆಯಡಿ ತೋಟಗಾರಿಕೆ ರೈತರು ಅಧಿಸೂಚಿತ ಬೆಳೆಗಳಿಗೆ ಸಂಬಂಧಿಸಿ ಸಾಲ ಪಡೆದುಕೊಂಡಿರುವ ಬ್ಯಾಂಕ್‍ಗಳ ಮೂಲಕ ಹಾಗೂ ಸಾಲ ಪಡೆಯದಿರುವ ರೈತರು ಉಳಿತಾಯ ಖಾತೆಯನ್ನು ಹೊಂದಿರುವ ಬ್ಯಾಂಕ್ ಗಳ ಮೂಲಕ ವಿಮಾ ಕಂತುಗಳನ್ನು ಪಾವತಿಸಿ ಯೋಜನೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಅಡಿಕೆ ಬೆಳೆಗೆ ಪ್ರತೀ ಹೆಕ್ಟೆರ್ ಗೆ ವಿಮಾ ಮೊತ್ತ 128000 ರೂ.ಗಳಲ್ಲಿ, ರೈತರು ಪಾವತಿಸಬೇಕಾದ ವಿಮಾಕಂತು 6,400 ರೂ.ಗಳು, ಕರಿಮೆಣಸು ಪ್ರತೀ ಹೆಕ್ಟೆರ್ ಗೆ ವಿಮಾ ಮೊತ್ತ 47,700 ರೂ.ಗಳಲ್ಲಿ ರೈತರು ಪಾವತಿಸಬೇಕಾದ ವಿಮಾಕಂತು 2,350 ರೂ.ಗಳು. ಈ ಯೋಜನೆಯಡಿ 2022ರ ಮುಂಗಾರು ಹಂಗಾಮಿನಲ್ಲಿ ಸ್ಥಳೀಯ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ ಮತ್ತು ಮೇಘಸ್ಫೋಟದಿಂದ ಬೆಳೆನಷ್ಟ ಸಂಭವಿಸಿದಲ್ಲಿ ಬೆಳೆವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ಹಾನಿ ಸಂಭವಿಸಿದ 72 ಗಂಟೆಯೊಳಗೆ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣಗಳನ್ನು ಲಿಖಿತವಾಗಿ ನೀಡಬೇಕು. ಇಂತಹ ಸಂದರ್ಭದಲ್ಲಿ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆವಿಮಾ ನಷ್ಟ ಪರಿಹಾರವನ್ನು ವಿಮಾ ಸಂಸ್ಥೆಯು ಕಂದಾಯ, ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳ ಸಹಯೊಗದೊಂದಿಗೆ ಇತ್ಯರ್ಥ ಪಡಿಸುತ್ತದೆ. ಇದರ ಹೊರತು ಸಾಮಾನ್ಯ ಸಂದರ್ಭಗಳಲ್ಲಿ ಬೆಳೆ ನಷ್ಟಗಳನ್ನು ಜಿಲ್ಲಾ ಸಮಿತಿ ಹಾಗೂ ಸರ್ಕಾರಗಳು ಅನುಮೋದಿಸಿರುವ ಟೀಮ್ ಶೀಟ್ ಗಳಲ್ಲಿನ ಪೇ ಔಟ್ ಸ್ಟ್ರಕ್ಚರ್, ಡ್ಯೂರೇಷನ್,  ಪರಿಗಣಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ವಿಮಾ ಸಂಸ್ಥೆಗಳು ಲೆಕ್ಕ ಹಾಕಿ ಇತ್ಯರ್ಥ ಪಡಿಸುತ್ತವೆ.
ಹಣಕಾಸು ಸಂಸ್ಥೆಗಳಿಂದ ಬೆಳೆ ಸಾಲವನ್ನು ಹೊಂದಿಲ್ಲದ ತೋಟಗಾರಿಕೆ ರೈತರು ನಿಗದಿತ ಅರ್ಜಿಯೊಂದಿಗೆ ಜಮೀನಿನ ಪಹಣಿ ಪ್ರತಿ, ಉಳಿತಾಯ ಖಾತೆ ಪಾಸ್ ಪುಸ್ತಕ,ಆಧಾರ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಹೊಂದಿಲ್ಲದಿದ್ದಲ್ಲಿ ಸರ್ಕಾರದ ಇತರೆ ಯಾವುದೇ ಅಧಿಕೃತ ಗುರುತಿನ ಚೀಟಿ,ಸ್ವಯಂ ಘೋಷಿಸಿ ದೃಢೀಕರಿಸಿದ ಜಮೀನಿನ ಬೆಳೆ ಪತ್ರ ಹಾಗೂ ಪ್ರಿಮಿಯಂ ವಿಮಾ ಮೊತ್ತದೊಂದಿಗೆ ಸಲ್ಲಿಸಿ ನೊಂದಣಿ ಮಾಡಿಸಿಕೊಳ್ಳಬಹುದು. ಈ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಗಳು ರೈತ ಸಮುದಾಯಕ್ಕೆ ಉಪಯುಕ್ತವಾದ ಯೋಜನೆಯಾಗಿಸಲು ಉದ್ದೇಶಿಸಿರುವುದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಯೋಜನೆಯ ಲಾಭವನ್ನು ಪಡೆಯಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗೆ ಸ್ಥಳೀಯ ವಾಣಿಜ್ಯ, ಗ್ರಾಮೀಣ ಸಹಕಾರಿ ಬ್ಯಾಂಕ್, ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ತೋಟಗಾರಿಕೆ ಅಥವಾ ಕೃಷಿ ಅಧಿಕಾರಿಗಳು, ತಾಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯನ್ನು ಅಥವಾ ಮಂಗಳೂರು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ: 8277806378, ದೂ.ಸಂಖ್ಯೆ: 0824-2423615, ಬಂಟ್ವಾಳ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ:9448206393 ದೂ.ಸಂಖ್ಯೆ:08255-234102, ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ:9731854527 ದೂ.ಸಂಖ್ಯೆ: 08251-230905, ಸುಳ್ಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ: 9880993238, ದೂ.ಸಂಖ್ಯೆ:08257-232020, ಬೆಳ್ತಂಗಡಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮೊ.ಸಂಖ್ಯೆ:9448336863 ದೂ.ಸಂಖ್ಯೆ: 08256-232148 ಮೂಲಕ ಸಂಪರ್ಕಿಸುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

10 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

15 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

23 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

23 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

2 days ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago