ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು ಹೇಳಿದರು
ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…