ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು ಹೇಳಿದರು
ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…