ಹವಾಮಾನ ಆಧಾರಿತ ಬೆಳೆ ವಿಮೆಯನ್ನು ಸರಕಾರ ತಕ್ಷಣ ಜಾರಿ ಮಾಡುವಂತೆ ಸುಳ್ಯ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2016ರಿಂದ ಆರಂಭಗೊಂಡಿರುವ ಬೆಳೆ ವಿಮೆಯಿಂದ ಕೃಷಿಕರು ಪ್ರಯೋಜನ ಪಡೆಯುತ್ತಿದ್ದಾರೆ. ಪ್ರತಿ ವರ್ಷ ಜೂ.30ರೊಳಗೆ ಪ್ರೀಮಿಯಂ ಪಾವತಿಯಾಗಿರುತ್ತದೆ. ಆದರೆ ಈ ಬಾರಿ ಜೂನ್ ತಿಂಗಳು ಮುಗಿಯುತ್ತಾ ಬಂದರೂ ಇನ್ನೂ ಕೂಡಾ ಸಹಕಾರಿ ಸಂಘಕ್ಕೆ ಪ್ರೀಮಿಯಂ ಪಾವತಿಗೆ ಯಾವುದೇ ಆದೇಶಗಳು ಬಂದಿಲ್ಲ. ಹೀಗಾಗಿ ಸರಕಾರ ವಿಳೆವಿಮೆ ಪಾವತಿಗೆ ಸಹಕಾರಿ ಸಂಘಗಳಿಗೆ ತಕ್ಷಣ ಆದೇಶ ನೀಡಬೇಕು. ವಿಳಂಬವಾದರೆ ಸಹಕಾರಿ ಸಂಘಗಳಿಗೂ ಕೆಲಸದ ಒತ್ತಡಗಳು ಹೆಚ್ಚಾಗುತ್ತವೆ ಎಂದು ಹೇಳಿದರು
ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಸಹಕಾರಿ ಯೂನಿಯನ್ ನಿರ್ದೇಶಕರಾದ ದಯಾನಂದ ಕುರುಂಜಿ, ಶಾರದಾ ವಿ. ಶೆಟ್ಟಿ, ಸಹಕಾರಿ ಯೂನಿಯನ್ ಕಾರ್ಯದರ್ಶಿ ವಾಸುದೇವ ನಾಯಕ್ ಕೇರ್ಪಳ ಉಪಸ್ಥಿತರಿದ್ದರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…