ಬೆಳೆ ವಿಮೆ ನೋಂದಣಿಗೆ ಅರ್ಜಿ ಆಹ್ವಾನ

August 4, 2023
8:04 PM
2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.ಜು.31ರೊಳಗೆ ಈ ಯೋಜನೆಗೆ ರೈತರು ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವನ್ನು ತುಂಬಿಕೊಡುವ ನಿಟ್ಟಿನಲ್ಲಿ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯನ್ನು ಜಾರಿಗೊಳಿಸಿದೆ.

ದ ಕ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ಈ ಯೋಜನೆಯಡಿ ಬೆಳೆ ಸಾಲ ಪಡೆದಿರುವ ಹಾಗೂ ಬೆಳೆ ಸಾಲ ಹೊಂದಿಲ್ಲದ ರೈತರು ನೋಂದಾಯಿಸಿಕೊಳ್ಳಬಹುದು. ಬೆಳೆಸಾಲ ಪಡೆದ ರೈತರು ಬೆಳೆಸಾಲ ಹೊಂದಿರುವ ಬ್ಯಾಂಕ್ ನಲ್ಲಿ ಹಾಗೂ ಬೆಳೆಸಾಲ ಹೊಂದಿಲ್ಲದ ರೈತರು ತಮ್ಮ ಉಳಿತಾಯ ಖಾತೆ ಹೊಂದಿರುವ ಬ್ಯಾಂಕ್‍ಗಳಲ್ಲಿ ಈ ಯೋಜನೆಯಡಿ ನೋಂದಾಯಿಸಬಹುದು. ಸಾರ್ವಜನಿಕ ಸೇವಾ ಕೇಂದ್ರದ ಮೂಲಕವೂ ನೋಂದಾಣೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ರೈತರು ಪಾವತಿಸಬೇಕಾದ ಪ್ರೀಮಿಯಂ ಮೊತ್ತ ಕ್ರಮವಾಗಿ 6,400 ರೂ. ಹಾಗೂ 2,350 ರೂ.ಗಳಾಗಿದ್ದು ಜು.31ರೊಳಗೆ ನೋಂದಾಯಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror