ಚಿಕ್ಕಮಗಳೂರು ಜಿಲ್ಲೆಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿಗೆ ಮತ್ತು ಮುಂಬರುವ ಬೇಸಿಗೆ ಹಂಗಾಮಿನ ಬೆಳೆಗಳಿಗೆ ವಿಮೆಯನ್ನು ನೋಂದಾಯಿಸಿಕೊಳ್ಳಲು ಕರ್ನಾಟಕ ರೈತ ಸುರಕಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯು ರೈತರಿಗೆ ಕರೆ ನೀಡಿದೆ. ಈ ಯೋಜನೆಯ ಲಾಭವನ್ನು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ಎಲ್ಲಾ ರೈತರು ಪಡೆದುಕೊಳ್ಳಬಹುದು. ಡಿ.1 ಅಂತಿಮ ದಿನವಾಗಿದೆ.
ಈ ವಿಮಾ ಯೋಜನೆಯು ಹವಾಮಾನ ವೈಪರೀತ್ಯ ಅಥವಾ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆ ನಷ್ಟಕ್ಕೆ ಪರಿಹಾರವನ್ನು ಒದಗಿಸುತ್ತದೆ. ರೈತರು ತಮ್ಮ ಪ್ರದೇಶದಲ್ಲಿ ಲಭ್ಯವಿರುವ ನಿರ್ದಿಷ್ಟ ಬೆಳೆಗಳ ಮಾಹಿತಿಯನ್ನು ಕೃಷಿ ಇಲಾಖೆಯಲ್ಲಿ ದೃಢಿಕರಿಸಿಕೊಳ್ಳಬೇಕು. ಏಕೆಂದರೆ ಗ್ರಾಮ ಪಂಚಾಯತ್ ಮಟ್ಟ ಮತ್ತು ಹೋಬಳಿ ಮಟ್ಟದ ಬೆಳೆಗಳಿಗೆ ನಷ್ಟ ಅಂದಾಜಿಸುವ ಮಾನದಂಡಗಳು ಬದಲಾವಣೆ ಇದೆ. ಈ ಯೋಜನೆಗಳ ನೊಂದಾಯಿತ ದಿನವು ಬದಲಾವಣೆ ಇರುವುದರಿಂದ ರೈತರು ತಪ್ಪದೆ ಆಯಾ ಗ್ರಾಮದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಇಲಾಖೆ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…