Advertisement
MIRROR FOCUS

ಅಡಿಕೆ ಬೆಳೆ ನಷ್ಟವಾಗಿದೆ | ಬೆಳೆ ವಿಮೆ ಪರಿಹಾರ ಕಡಿಮೆಯಾಗಿದೆ.. ಮುಂದೇನು ಮಾಡಬಹುದು..?

Share
ಹವಾಮಾನ ಆಧಾರಿತ ಬೆಳೆ ವಿಮೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಡುಗಡೆಯಾಗಿದೆ. ಇನ್ನೂ ಕೆಲವು ಗ್ರಾಮಗಳ ಕೃಷಿಕರ ಖಾತೆಗೆ ಜಮಾ ಆಗಲು ಬಾಕಿ ಇದೆ. ಅಡಿಕೆ-ಕಾಳುಮೆಣಸು ಬೆಳೆಗಳಿಗೆ ಪ್ರತ್ಯೇಕವಾಗಿ ಜಮಾ ಆಗುತ್ತದೆ. ಈ ಬಾರಿಯ ಹವಾಮಾನ ಕೈ ಕೊಟ್ಟಿರುವುದು ಎಲ್ಲಾ ಕೃಷಿಕರಿಗೂ ತಿಳಿದೇ ಇದೆ. ಹೀಗಾಗಿ ಬೆಳೆ ವಿಮೆಯೂ ಬರಲೇ ಬೇಕಾಗಿತ್ತು. ಈಗ ಬಿಡುಗಡೆಯಾಗಿರುವ ವಿಮಾ ಹಣದ ಬಗ್ಗೆ ಅನೇಕ ತಕರಾರರುಗಳು ಇವೆ. ಇದನ್ನು ಬಗೆಹರಿಸಿ ಅಡಿಕೆ ಬೆಳೆಗಾರರಿಗೆ ನ್ಯಾಯ ಸಿಗಲು ಏನು ಮಾಡಬಹುದು ಅದಕ್ಕೆ ಅಗತ್ಯವಾದ ಹೆಜ್ಜೆಗಳು ಅಗತ್ಯ ಇದೆ. ಈಗ, ವಿಮೆಯ ಮೂಲಕ ಬಂದಿರುವ ಹಣ ಕಡಿಮೆಯಾಗಿದೆ, ಕಳೆದ ವರ್ಷದಷ್ಟು ಬಂದಿಲ್ಲ ಇತ್ಯಾದಿ ಇರುವ ಅಸಮಾಧಾನ. ವಿಮಾ ಕಂಪನಿಗೆ ಲಾಭವಾಗಿದೆ ಇತ್ಯಾದಿಗಳೂ ಸೇರಿವೆ. ಈ ಬಾರಿ ನಿಜಕ್ಕೂ ಅಡಿಕೆ ಬೆಳೆಗಾರರಿಗೆ ನಷ್ಟವಾಗಿದೆ. ಈ ಸಮಯದಲ್ಲಿ ಹೆಚ್ಚಿನ ಪರಿಹಾರ ಬೇಕಾಗಿತ್ತು.
ಈಗ ಅಡಿಕೆ ಬೆಳೆಗಾರರು  ಮುಂದಿನ ವರ್ಷ ಈ ಯೋಜನೆ ಇರಬಹುದೇ..? ಇಲ್ಲವಾಗಬಹುದೇ..? ಎಂದು ಯೋಚಿಸುವುದು ಕೂಡಾ ಆಗಬೇಕು. ಮುಂದಿನ ವರ್ಷ ಈ ಯೋಜನೆ ಸರಿಯಾಗಿ ಜಾರಿಯಾಗಬೇಕಾದರೆ ಈಗಲೇ ಏನೆಲ್ಲಾ ಮಾಡಬೇಕು ಅದಕ್ಕೆ ಮೊದಲ ಆದ್ಯತೆಯ ನೆಲೆಯಲ್ಲಿ  ಕೆಲಸ ಆಗಬೇಕು. ಈ ಬಾರಿ ಬೆಳೆ ವಿಮೆ ತಡವಾಗುತ್ತದೆ, ಅಥವಾ ಬಾರದೇ ಇರುವ ಸಾಧ್ಯತೆ ಇದೆ ಎಂದು ಕಳೆದ ಸಲವೇ ಮುನ್ಸೂಚನೆ ಇತ್ತು, ಆಗಸ್ಟ್‌ ಹೊತ್ತಿಗೂ ಅನುಮಾನ ಇತ್ತು. ಆದರೆ ಈಗ ಅದಕ್ಕೆ ಕಾರಣ ತಿಳಿಯಿತು, ಪಂಚಾಯತ್‌ ಮಟ್ಟದಲ್ಲಿ ಇರುವ ಮಳೆ ಮಾಪನಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ, ಹವಾಮಾನದ ಯಾವ ದಾಖಲೆಗಳೂ ಸರಿಯಾಗಿ ನಿರ್ವಹಣೆ ಇಲ್ಲ. ಎಲ್ಲವೂ ಅಟೋಮ್ಯಾಟಿಕ್‌ ಆಗಿ ದಾಖಲಾಗುವ ಈ ಸಮಯದಲ್ಲಿ ಯಾಕೆ ಇಲಾಖೆಗಳು ಹವಾಮಾನದ ದಾಖಲೆ ಇರಿಸಿಕೊಂಡಿಲ್ಲ.
ಈಚೆಗೆ ಎಲೆಚುಕ್ಕಿ ರೋಗ ತೀವ್ರತೆ ಪಡೆದಾಗ ಅದರ ಅಧ್ಯಯನಕ್ಕಾಗಿ ಮಳೆ-ತಾಪಮಾನ ಹಾಗೂ ತೇವಾಂಶದ ದಾಖಲೆ ಬೇಕಾಗಿತ್ತು. ಯಾವ ಹವಾಮಾನದಲ್ಲಿ ಹೆಚ್ಚು ಕಡಿಮೆಯಾಗುತ್ತದೆ ಎನ್ನುವ ಅಧ್ಯಯನ ವಿಜ್ಞಾನಿಗಳಿಗೆ ಬೇಕಾಗಿತ್ತು. ಆದರೆ ಎಲ್ಲೂ ಈ ಮಾಹಿತಿ ಅಧಿಕೃತವಾಗಿ ಸಿಕ್ಕಿಲ್ಲ. ಆಗ ಕೃಷಿಕರ ಮಳೆ ಡಾಟಾವನ್ನು , ಹವಾಮಾನದ ಡಾಟಾವನ್ನು ಕೃಷಿಕರ ಮಳೆ ಗುಂಪಿನ ಮೂಲಕ ಸೇರಿಕೊಂಡು ಒಬ್ಬರು ಸಿಬಂದಿ ಅದನ್ನು ಗಮನಿಸಿ ಅಧ್ಯಯನಕ್ಕೆ ನೀಡಿದ್ದರು. ಅದಾಗಿ ಈಗ ಅಟೊಮ್ಯಟಿಕ್‌ ಹವಾಮಾನ ದಾಖಲೆಯ ವ್ಯವಸ್ಥೆಯನ್ನು ಸಿಪಿಸಿಆರ್‌ಐ ಮಾಡುತ್ತಿದೆ. ಅದು ಎಲೆಚುಕ್ಕಿಯ ಮುಂದಿನ ಹಂತದ ಅಧ್ಯಯನಕ್ಕೆ.
ಹೀಗಿರುವಾಗ ಇಲಾಖೆಗಳ ಬಳಿ ಹವಾಮಾನದ ದಾಖಲೆ ಇಲ್ಲ ಎಂದು ಆಗಸ್ಟ್‌ ಸಮಯದಲ್ಲಿಯೇ ಬೆಳಕಿಗೆ ಬಂದಿದೆ. ಈಗ ಮಾಡಬೇಕಾದ ಕೆಲಸ ಪ್ರತೀ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿರುವ ಸಹಕಾರಿ ಸಂಘಗಳು ತಮ್ಮ ಪಂಚಾಯತ್‌ ಮಟ್ಟದಲ್ಲಿ ಮಳೆ ಮಾಪಕಗಳು ಸರಿಯಾಗಿ ಕೆಲಸ ಮಾಡುತ್ತದೆಯೇ ಎಂದು ಖುದ್ದಾಗಿ ಹೋಗಿ ನೋಡಬೇಕು. ಸರಿ ಇಲ್ಲವಾದರೆ ಅದನ್ನು ಇಲಾಖೆಯಲ್ಲಿ ಪ್ರಶ್ನಿಸಬೇಕು. ಈ ಕಾರಣದಿಂದಲೇ ನಮ್ಮ ಗ್ರಾಮದ ಅಡಿಕೆ ಬೆಳೆಗಾರರಿಗೆ ಸರಿಯಾಗಿ ಬೆಳೆ ವಿಮೆ ಪಾವತಿಯಾಗಿಲ್ಲ ಎಂದು ಒತ್ತಾಯಿಸಬೇಕು, ಸರಿಪಡಿಸಬೇಕು. ಈ ಮಳೆ ಡಾಟಾ ಮುಂದಿನ ಎಲ್ಲಾ ಕೃಷಿ ಕಾರ್ಯಗಳಿಗೂ ಅನುಕೂಲವಾಗುತ್ತದೆ. ಈ ಕೆಲಸವನ್ನು ಆಯಾ ಸಹಕಾರಿ ಸಂಘಗಳು ಹಾಗೂ ಪಂಚಾಯತ್‌ ಸದಸ್ಯರು ಮಾಡಿದರೆ ಮುಂದಿನ ವರ್ಷದಿಂದ ಕೃಷಿಕರಿಗೆ ಸರಿಯಾದ ನ್ಯಾಯ ಸಿಗಲು ಸಾಧ್ಯವಿದೆ.
ಈಗಾಗಲೇ ಯಾವ ಪಂಚಾಯತ್‌ ಮಟ್ಟದಲ್ಲಿ ಮಳೆ ದಾಖಲೆಗಳು ಸರಿಯಾದ ನಿರ್ವಹಣೆಯಾಗಿಲ್ಲ ಎಂಬುದನ್ನು ಗಮನಿಸಿ ಸರಾಸರಿ ತಾಪಮಾನ-ಹವಾಮಾನವನ್ನು ಸ್ಥಳೀಯವಾಗಿ ಕೃಷಿಕರೇ ಸಂಗ್ರಹಿಸುವ ಮಳೆ ದಾಖಲೆಗಳನ್ನು ತುಲನೆ ಮಾಡಿ ಇಲಾಖೆಗಳ ಮೂಲಕ ವಿಮಾ ಕಂಪನಿಯ ಗಮನಕ್ಕೆ ತಂದು ಒತ್ತಾಯ ಮಾಡಬಹುದು. ಏಕೆಂದರೆ ಈ ವಿಮಾ ಹಣ ವಿತರಣೆಯ ಅವಧಿ ಇನ್ನೂ ಒಂದು ತಿಂಗಳ ಇರಲಿದೆ. ಒಮ್ಮೆ ಈ ಕಡತ ಕ್ಲೋಸ್‌ ಆದರೆ ಮುಂದೆ ಯಾವುದೇ ಪರಿಹಾರ, ವಿಮಾ ಹಣ ವಿತರಣೆ ಇರುವುದಿಲ್ಲ. ಹೀಗಾಗಿ ಈಗಲೇ ಒತ್ತಾಯಗಳು ನಡೆಯಬೇಕು.
ಈ ಹವಾಮಾನ ಆಧಾರಿತ ಬೆಳೆ ವಿಮೆಯ ಕತೆ ಇಲ್ಲಿ ಮಾತ್ರವಲ್ಲ ದೇಶದ ಎಲ್ಲಾ ಕಡೆಯಲ್ಲೂ ಇದೇ ಸಮಸ್ಯೆ. ಹವಾಮಾನ ದಾಖಲೆಗಳ ನಿರ್ವಹಣೆ ಸರಿಯಾಗಿ ಆಗದೇ ಇದ್ದರೆ ಪರಿಹಾರ ವಿತರಣೆಯಲ್ಲೂ ವ್ಯತ್ಯಾಸವಾಗುತ್ತದೆ. ದೇಶದ ಹಲವು ಕಡೆಗಳಲ್ಲಿ ಈ ಸಮಸ್ಯೆ ಆಗಿದೆ, ಆಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

2 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

2 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

2 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

12 hours ago